Skip to main content

ಮೌಢ್ಯ

ಮೌಢ್ಯಗಳಿಂದ ಹೊರಬನ್ನಿ

ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ   ಕೊರೊನಾ ತಡೆಗಟ್ಟಲು ಕೆಲ ಹಳ್ಳಿಗಳಲ್ಲಿ ಮತ್ತು ಬೆಂಗಳೂರಿನಂತಹ ಭಾರಿ ನಗರಗಳಲ್ಲಿಯೂ ಮೂಢನಂಬಿಕೆಗಳನ್ನು  ಜನರು ನಂಬುತ್ತಿದ್ದಾರೆ. ಈ ಹಿಂದೆಯೂ ಪ್ಲೇಗ್ ಎಂಬ ಸಾಂಕ್ರಾಮಿಕ ಕಾಯಿಲೆ ಬಂದಾಗ ಪ್ಲೇಗಮ್ಮ ಎಂದು ಅದಕ್ಕೆ ಸ್ತ್ರೀ ರೂಪ ನೀಡಿ ದೇವಿಯ ರೂಪದಲ್ಲಿ ಆರಾಧಿಸುವ ಮೂಲಕ ಹೇಗೆ ಅವೈಜ್ಞಾನಿಕ ತಳಹದಿಯ ಮೇಲೆ ನಿಂತಿದ್ದರೊ ಹಾಗೇ ಈಗಲೂ ಪುನರಾವರ್ತನೆಯಾಗುತ್ತಿದೆ.

ಮದ್ದೂರು ಪಟ್ಟಣದಲ್ಲಿ ಯುವಕ ಮತ್ತು ಯುವತಿಯರು ಸೇರಿ ಕೋರೊನಾ ಮಾರಮ್ಮನ ಹೆಸರಿನಲ್ಲಿ ಹಬ್ಬವನ್ನೇ ಆಚರಿಸಿದರು.ಮಣ್ಣಿನಿಂದ ತಯಾರಿಸಿದ ಮೂರ್ತಿಯನ್ನು ವೇಷಧರಿಸಿ  ತಲೆ ಮೇಲೆಹೊತ್ತುಕೊಂಡು ಊರಿನ ಕೆಲ ಭಾಗಗಳಲ್ಲಿ ಮೆರವಣಿಗೆ ಸಾಗಿದ ಘಟನೆಯು ಜರುಗಿದೆ.
ಇವುಗಳಿಂದಾಗಿ ಸೊಂಕು ಹರಡುವ ಪ್ರಮಾಣ ಹೆಚ್ಚುತ್ತಿದೆ ಹೊರತಾಗಿ ರೋಗದ ಮುಕ್ತಿಗಾಗಿ ಅವರ ಬೇಡಿಕೆ ಇಡೇರುತ್ತಿಲ್ಲ. ಇದರೊಟ್ಟಿಗೆ ಶಿಂಷಾ ನದಿಯ ತೀರದಲ್ಲಿ ಮೂರ್ತಿಯನ್ನು ಮುಳುಗಿಸಿ, ಮೊಸರಿನಿಂದ ಪೂಜೆಮಾಡಿ ನೀರನ್ನು ಸಿಂಪಡಣೆ ಮಾಡಿದ್ದಾರೆ.

ನದಿಗಳಲ್ಲಿ ನಿಂಬೆಹಣ್ಣು ತೇಲಿಬಿಡುವುದು. ಮಾಹಾಪೂಜೆ , ಯಾಗಗಳ ಹೆಸರಿನಲ್ಲಿ ಅನ್ನದ ಆಹುತಿ ಬಲಿಯ ಹೆಸರಿನಲ್ಲಿ ಬಂಡಿತುಂಬ ಅನ್ನವನ್ನು ಊರಿನ‌ ಹೊರವಲಯದಲ್ಲಿ ಬೀರುವ ಆಚರಣೆಗಳು ಖಂಡಿಸುವಂತದ್ದು. ಸಾಮಾಜಿಕ ಪರಿಕಲ್ಪನೆಯನ್ನೂ ಹೊರತುಪಡಿಸಿ ಇಂತಹ ಆಚರಣೆಗಳು ಇಂದಿನ ಆಧುನಿಕ ಕಾಲದಲ್ಲಿ ಕಾಣಿಸುತ್ತಿದೆ.

ಬೆಂಗಳೂರಿನ ರಸ್ತೆಯಲ್ಲಿ ಮೂರುಕಲ್ಲಿನ ಚೂರುಗಳನ್ನು ಒಂದೆಡೆ ಇಟ್ಟು ಅದಕ್ಕೆ ಅರಶಿನ ಕುಂಕುಮ ಬಳಿದು ಪೂಜೆಮಾಡಿ ಕೊರೋನಾದಿಂದ ರಕ್ಷಿಸುವಂತೆ ಪ್ರಾರ್ಥನೆ ಮಾಡಿದ್ದಾರೆ. ಇನ್ನು ಇಂತಹ ಕಾರ್ಯದಲ್ಲಿ ವಿದ್ಯಾವಂತರು ತಮ್ಮ ನಿಲುವನ್ನು ತೋರಿಸುತ್ತಾ, ಮೂಕ ಪ್ರಾಣಿಗಳನ್ನು ಬಲಿಕೊಡುತ್ತಿರುವ ಸಂಗತಿಯೂ ನಡೆಯುತ್ತಿದೆ. ಮಣ್ಣಿನ ಮೂರ್ತಿ ಮಾಡಿ ನದಿಗಳಲ್ಲಿ ತೇಲಿಬಿಡಲಾಗುತ್ತಿದೆ.

ಚಿಕ್ಕನಾಯಕನಹಳ್ಳಿಯಲ್ಲಿ  ಎಂ.ಎಸ್.ಡಬ್ಲ್ಯೂ ಪದವಿದರನೊಬ್ಬ ಕೊರೊನಾ ದೇವಿ ದೇವಸ್ಥಾನದ ಅರ್ಚಕನಾಗಿ ಕೋರೊನಾ ಮಾರಮ್ಮನ ಭಕ್ತನಾಗಿದ್ದೇನೆ ಇದರಿಂದ ಜನರಿಗೆ ಒಳಿತಾಗುತ್ತದೆ ಎಂದು ಮಾಧ್ಯಮಗಳ ಎದುರಲ್ಲಿ ನೀಡಿದ ಉತ್ತರ ಇಂದಿನ ಸಮಾಜದ ವಿದ್ಯಾವಂತರ ಸ್ಥಾನವನ್ನು ತೋರ್ಪಡಿಸುತ್ತಿದೆ.

ಮೂಢನಂಬಿಕೆ ಅಲ್ಲ ಇದು ಮೂಲ ನಂಬಿಕೆ ಎಂಬ ವಿಚಾರಗಳು ಆಚರಣೆ ಮಾಡುವವರ ತಲೆಯಲ್ಲಿದೆ. ಕೊರೊನಾ ವ್ಯಾಕ್ಸಿನೇಷನ್‌ ಮಾಡಿಸಿಕೊಳ್ಳಿ ಎಂದರೆ, ನಮಗೆ ಯಾವ ಖಾಯಿಲೆಯೂ ಇಲ್ಲ ಎಂದು ವ್ಯಾಕ್ಸಿನೇಷನ್‌ ನಿಂದ ದೂರ ಉಳಿದಿದ್ದಾರೆ.

ಕೆಲವೆಡೆ ಸಗಣಿ ನೀರಿನಿಂದ ಸ್ನಾನಮಾಡಿ ಕೊವಿಡ್ ಓಡಿಸುವ ಯತ್ನಗಳೂ ನಡೆದಿವೆ. ಏನೇ ಆದರೂ ಮೂಢ ನಂಬಿಕೆಗಳಿಗಳಿಂದ ಕೊವಿಡ್ ಸೋಂಕನ್ನು ದೂರಮಾಡಲು ಸಾಧ್ಯವಿಲ್ಲ ಎಂಬುದಂತೂ ಸ್ಪಷ್ಟ. ಇಂತಹ ಮೌಢ್ಯಗಳಿಂದ ದೂರವುಳಿಯವುದು ಸಹ ಕೊವಿಡ್ ಪಿಡುಗನ್ನು ಇಲ್ಲವಾಗಿಸುವ ಒಂದು ವಿಧಾನವೇ ಸರಿ.

ಕೊರೊನಾ ಮಹಾಮಾರಿ ಸಾಂಕ್ರಾಮಿಕ ರೋಗ ಹಬ್ಬುತ್ತಿರುವ  ಈ ಸಂಧರ್ಭದಲ್ಲಿ ಎಲ್ಲರೂ ತಪ್ಪದೆ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಲಸಿಕೆ ಪಡೆದುಕೊಳ್ಳಬೇಕೆ ಹೊರತು ಮೂಢನಂಬಿಕೆ ಆಚರಣೆ ಸಲ್ಲದು.

ಸುಮಾ.ಕಂಚೀಪಾಲ್

Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...