Skip to main content

ಸ್ನೇಹ ಬಾಡದ ಮುದ್ದು ಪುಷ್ಪ

ಸ್ನೇಹ ಬಾಡದ ಮುದ್ದು ಪುಷ್ಪ

ಅಂಗನವಾಡಿ ಗೋಡೆ ಮೇಲೆ ಅಂದೆಂದೂ ಗೀಚಿದ ಸೇಹದ ಗೆರೆಗಳು ಇಂದಿಗೂ ಹಸಿರು . ಗೆಳೆತನದ ಬೀಜ ಅಂದು ಮನದಲ್ಲಿ ನೆಟ್ಟಿದ್ದು ಇಂದಿಗೂ ಹಸಿರಾಗಿ ಚಿಗುರಿಕೊಂಡೇ ಇದೇ..ಕಡ್ಡಿ ಕಳೆದೋದಾಗ ಕಡ್ಡಿ ಕೊಟ್ಟ ಗೆಳೆಯ ಇಂದು ದೊಡ್ಡ ಕಲಾಕಾರ . ಆದೆಷ್ಟೊ ಚಿತ್ರಗಳಿಗೆ ಜೀವ ತುಂಬುತ್ತಿದ್ದಾನೆ .. ಕನ್ನಡ ಶಾಲೆಯಲ್ಲಿ ಪಕ್ಕದಲ್ಲೇ ಕುಳಿತು ಲೆಕ್ಕ ಬಿಡಿಸುತ್ತಿದ್ದವಳು ಇಂದು ಬ್ಯಾಂಕ್ ಮ್ಯಾನೇಜರ್. 

ಹೀಗೆಲ್ಲಾ ಚಿಗುರಿದ್ದು ಇಂದು ಎಣಿಸಲಾಗದಷ್ಟು ನೆನಪೆಂಬ ಎಲೆಗಳಿಂದ ತುಂಬಿಹೋಗಿದೆ . ಈಜಲೆಂದು ಹೋಗಿ ಜೀವ ಕಳೆದುಕೊಂಡ ಬಸ್ಯಾ ಇನ್ನು ನೆನಪಿಗೆ ಬರುತ್ತಾನೆ .. ಹೀಗೆ ಉದುರಿ ಹೋದ ಎಲೆಗಳು ಬಹಳ ಸಂತೋಷಕ್ಕೆ ಸಾತ್ ನೀಡಿ ದುಃಖದಲ್ಲಿ ಸಂತೈಸಿ ಕ್ಷಣ ಕ್ಷಣ ಜೊತೆಯಾಗಿರುವವರು ಸ್ನೇಹಿತರೇ.


 ಇನ್ನು ಈ ಮರಕ್ಕೆ ಕೆಲವು ಹೂವುಗಳು ಅನಿರೀಕ್ಷಿತವಾಗಿ ಸಿಗುವ ಗೆಳೆಯರು ಒಂದು ದಿನಕ್ಕೆಲ್ಲಾ ಅರಳಿ ಎರಡು ಮೂರು ದಿನಕ್ಕೆ ಬಾಡಿ ಉದುರಿ ಹೋಗುತ್ತವೆ.ಕ್ಯಾಂಪ್‌ಗಳಲ್ಲಿ , ಬಸ್‌ನಲ್ಲಿ , ಪ್ರವಾಸದಲ್ಲಿ ಸಿಗುವ ಈ ಹೂವುಗಳ ಪರಿಮಳವಂತು ಹೂ ಉದುರಿದರೂ ಉಳಿವಂತ ಕಂಪು ನೀಡಿವೆ. ಕೆಲವು ಹೂವಾಗಿ ಹಣ್ಣಾಗಿ ಕೊಳೆತು ನಾರಿ ಹೇಸಿಗೆಯನ್ನು ಉಂಟುಮಾಡಿದೆ . ಎಷ್ಟೇ ಆದರೂ ಅದು ನಮ್ಮ ಮರದ ಕಾಯಿಯೇ ಎಂದುಸುಮ್ಮನಿದ್ದು ಬಿಡುವುದು.

ಇನ್ನು ಕೆಲವು ಹಣ್ಣುಗಳು ತುಂಬಾ ರುಚಿಯಾಗಿ ಸಿಹಿಯನ್ನು ಮಾತ್ರ ನೀಡುವ ಸ್ನೇಹಿತರೂ ಇರುತ್ತಾರೆ . ಜೀವನ ಪೂರ್ತಿ ಆಳವಾಗಿ ಬೇರೂರಿ ಮರ ಗಟ್ಟಿಯಾಗಿ ನಿಲ್ಲಿಸುವಂತ , ಮರಕ್ಕೂ ಜೀವ ತುಂಬಿ ತನ್ನ ಜೀವವನ್ನೂ ಉಳಿದುಕೊಳ್ಳುವ ... ಸಹೃದಯಿ ಸ್ನೇಹಿತರೂ ಇದ್ದಾರೆ . ಒಂದು ಒಳ್ಳೆಯ ಗೆಳೆಯರ ಬಳಗವಿದ್ದವರು ಭುವಿಯನ್ನೇ ಬೆಳಗುವ ದೀಪವಾಗುವರು. ಗೆಳೆಯರ ಬಳಗವೇ ಕೆಟ್ಟದಾದರೆ ಭುವಿಗೆ ಬೆಂಕಿ ಇಡುವರು . ಜೀವನದುದ್ದಕ್ಕೂ ಹೀಗೆ ಹಲವು ಸ್ನೇಹಗಳು ಹುಟ್ಟಿರುತ್ತವೆ ಆದರೆ ಇದಕ್ಕೆಂದೂ ಸಾವಿಲ್ಲ . ವಯಸ್ಸಿನ ಮಿತಿಯೂ ಇಲ್ಲ . ಸ್ನೇಹ ಅಮರ . 

ಸುಮಾ ಕಂಚಿಪಾಲ್
2018 ರಲ್ಲಿ ಪ್ರಕಟವಾದ ಬರಹ.

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...