Skip to main content

ಚಿತ್ರಮಂದಿರಗಳತ್ತ ಇರಲಿ ಒಲವು

ಚಿತ್ರಮಂದಿರಗಳತ್ತ ಇರಲಿ ಒಲವು

ಚಿತ್ರಮಂದಿರಗಳು ಮುಚ್ಚಿ ಎರಡು ವರ್ಷಗಳಾಗುತ್ತಾ ಬಂತು. ಎರಡನೇ ಅಲೆಯ ನಂತರ ಏಳುತಿಂಗಳು ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಗಳು ಕಂಡಿಲ್ಲ. ಹೀಗಾಗಿ ಗಾಯದ ಮೇಲೆ ಬರೆ ಎರೆದಂತಾಗಿದೆ. ಇದಾಗಲೆ ಕೆಲವು ಚಿತ್ರ ಮಂದಿರಗಳು ಮುಚ್ಚಿವೆ. ಇನ್ನು ಕೆಲವು ಚಿತ್ರ ಮಂದಿರಗಳು ಅಳಿವಿನ ಅಂಚಿನಲ್ಲಿದೆ. ಸಿನಿ ಪ್ರಿಯರೂ ಸಹ ಕಿರುತೆರೆ ಮತ್ತು ಮೊಬೈಲ್ ಮೂಲಕವೆ ಚಿತ್ರವನ್ನು  ವೀಕ್ಷಿಸಲು ಆರಂಭಿಸಿದ್ದಾರೆ. 

ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಚಿತ್ರಮಂದಿರಗಳ ಪೈಕಿ ಇನ್ನು ಎಷ್ಟೋ ಚಿತ್ರ ಮಂದಿರಗಳು ತೆರೆದಿಲ್ಲ. ಚಿತ್ರಮಂದಿರಗಳು ತೆರೆದರೂ ಸಹ ಪ್ರೇಕ್ಷಕರು ಬರುತ್ತಿಲ್ಲ. ಇದರಿಂದ ಮಾಲಿಕರಿಗೆ ನಷ್ಟವಾಗುತ್ತಿದೆ‌. ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿದರೂ ಸಹ ಅರ್ಧದಷ್ಟು ಜನರನ್ನು ಮಾತ್ರ ಚಿತ್ರ ಮಂದಿರದೊಳಗೆ ಬಿಡಲು ಸೂಚಿಸಲಾಗಿದೆ. ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರು ತಮ್ಮ ಚಿತ್ರಗಳನ್ನು ಒ.ಟಿ.ಟಿ ಯಲ್ಲಿ ಬಿಡುಗಡೆ ಮಾಡಲು ಆಸಕ್ತಿ ಹೊಂದಿದ್ದಾರೆ. ಹೊರತಾಗಿ ಚಿತ್ರಮಂದಿರಗಳಿಗೆ ತಮ್ಮ ಚಿತ್ರ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. 

ಚಿತ್ರ ಮಂದಿರದ ಸಿಬ್ಬಂದಿಗಳ ಬದುಕಿನಲ್ಲಿ ನಿಶ್ಚಿತತೆ ಇಲ್ಲದಂತಾಗಿದೆ. ಚಿತ್ರ ಮಂದಿರಗಳು ಪಾಳುಬಿದ್ದ ಕಟ್ಟಡಗಳಂತಾಗಿ ಮಾರ್ಪಡುತ್ತಿದೆ. ಮತ್ತೆ ಆರಂಭಗೊಳ್ಳುವ ಸೂಚನೆಗಳು ಸಹ ದೊರೆಯುತ್ತಿಲ್ಲ. ಎಲ್ಲಾ ಭಾಷೆಯ ಚಿತ್ರರಂಗ ಸ್ತಬ್ಧವಾಗಿದೆ. ಚಿತ್ರೀಕರಣಕ್ಕೆ ಅಣಿಯಾಗಿದ್ದ ಸಿನಿಮಾಗಳೆಲ್ಲವೂ ನಿಂತು ಹೋಗಿವೆ. ಮುಹೂರ್ತ ಆಚರಿಸಲು ಸಿದ್ಧವಾಗಿದ್ದ ಸ್ಟಾರ್‌ಗಳ ಸಿನಿಮಾಗಳು ಮುಂದಕ್ಕೆ ಹೋಗಿವೆ. ಬಿಗ್‌ ಬಜೆಟ್‌ನಲ್ಲಿ ಸಿನಿಮಾ ಮಾಡಲು ಉತ್ಸಾಹ ತೋರಿದ್ದ ನಿರ್ಮಾಪಕರು, ಈಗ ಪರಿಸ್ಥಿತಿ ನೋಡಿಕೊಂಡು ಮುಂದುವರೆಯುವ ನಿರ್ಧಾರಕ್ಕೆ ಬಂದಿದ್ದಾರೆ. 

ಇವತ್ತಿನ ಈ ಪರಿಸ್ಥಿತಿ 2022ರಲ್ಲಿ ಕನ್ನಡ ಚಿತ್ರ ರಂಗದ ಮೇಲೆ ಮೇಲೆ ಪರಿಣಾಮ ಬೀರಲಿದೆ. ಅದರಲ್ಲೂ 2022ರ ಆರಂಭದ ನಾಲ್ಕೈದು ತಿಂಗಳು ಕನ್ನಡ ಚಿತ್ರ ರಂಗ ತುಂಬಾ ನೀರಸವಾಗಿ ಸಾಗುವ ಸಾಧ್ಯತೆ ಇದೆ. ಚಿತ್ರ ಮಂದಿರದ ಮಾಲಿಕರು ಹಾಕು ಕೆಲಸಗಾರರು ಮತ್ತು ಕಲಾವಿದರ ಕುರಿತಾಗಿ ಸರ್ಕಾರ ಅಷ್ಟೊಂದಾಗಿ ಯಾವ ಪರಿಹಾರವನ್ನು ನೀಡಿಲ್ಲ. ಜನರಿಲ್ಲದೆ ನಷ್ಟ ಅನುಭವಿಸುತ್ತಿದ್ದ ಚಿತ್ರ ಮಂದಿರಗಳಿಗೆ ಆರ್ಥಿಕ ಚೇತರಿಕೆ ಎನ್ನುವಂತೆ ಚಿತ್ರ ಮಂದಿರಗಳ ಆಸ್ತಿ ತೆರಿಗೆಯನ್ನು ಸರಕಾರ ಮನ್ನಾ ಮಾಡಿದೆ.

ಪ್ರೇಕ್ಷಕರು ಕ್ರಮೇಣ ಚಿತ್ರ ಮಂದಿರಗಳತ್ತ ಮುಖಮಾಡುತ್ತಾರೆ. ಆದರೆ ಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಮೊದಲು ಕೈ ಹಿಡಿದು ನಡೆಸಿದ ಚಿತ್ರ ಮಂದಿರಗಳತ್ತ  ಒಲವಿರಬೇಕು. ಇಲ್ಲವಾದರೆ ಚಿತ್ರಮಂದಿರದ ಸಿಬ್ಬಂದಿಗಳು ಮತ್ತು ಕೆಲಸಗಾರರು ನಿರುದ್ಯೋಗಿಗಳಾಗುತ್ತಾರೆ.

ಸುಮಾ.ಕಂಚೀಪಾಲ್

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...