Skip to main content

ಚಿತ್ರಮಂದಿರಗಳತ್ತ ಇರಲಿ ಒಲವು

ಚಿತ್ರಮಂದಿರಗಳತ್ತ ಇರಲಿ ಒಲವು

ಚಿತ್ರಮಂದಿರಗಳು ಮುಚ್ಚಿ ಎರಡು ವರ್ಷಗಳಾಗುತ್ತಾ ಬಂತು. ಎರಡನೇ ಅಲೆಯ ನಂತರ ಏಳುತಿಂಗಳು ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಗಳು ಕಂಡಿಲ್ಲ. ಹೀಗಾಗಿ ಗಾಯದ ಮೇಲೆ ಬರೆ ಎರೆದಂತಾಗಿದೆ. ಇದಾಗಲೆ ಕೆಲವು ಚಿತ್ರ ಮಂದಿರಗಳು ಮುಚ್ಚಿವೆ. ಇನ್ನು ಕೆಲವು ಚಿತ್ರ ಮಂದಿರಗಳು ಅಳಿವಿನ ಅಂಚಿನಲ್ಲಿದೆ. ಸಿನಿ ಪ್ರಿಯರೂ ಸಹ ಕಿರುತೆರೆ ಮತ್ತು ಮೊಬೈಲ್ ಮೂಲಕವೆ ಚಿತ್ರವನ್ನು  ವೀಕ್ಷಿಸಲು ಆರಂಭಿಸಿದ್ದಾರೆ. 

ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಚಿತ್ರಮಂದಿರಗಳ ಪೈಕಿ ಇನ್ನು ಎಷ್ಟೋ ಚಿತ್ರ ಮಂದಿರಗಳು ತೆರೆದಿಲ್ಲ. ಚಿತ್ರಮಂದಿರಗಳು ತೆರೆದರೂ ಸಹ ಪ್ರೇಕ್ಷಕರು ಬರುತ್ತಿಲ್ಲ. ಇದರಿಂದ ಮಾಲಿಕರಿಗೆ ನಷ್ಟವಾಗುತ್ತಿದೆ‌. ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿದರೂ ಸಹ ಅರ್ಧದಷ್ಟು ಜನರನ್ನು ಮಾತ್ರ ಚಿತ್ರ ಮಂದಿರದೊಳಗೆ ಬಿಡಲು ಸೂಚಿಸಲಾಗಿದೆ. ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರು ತಮ್ಮ ಚಿತ್ರಗಳನ್ನು ಒ.ಟಿ.ಟಿ ಯಲ್ಲಿ ಬಿಡುಗಡೆ ಮಾಡಲು ಆಸಕ್ತಿ ಹೊಂದಿದ್ದಾರೆ. ಹೊರತಾಗಿ ಚಿತ್ರಮಂದಿರಗಳಿಗೆ ತಮ್ಮ ಚಿತ್ರ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. 

ಚಿತ್ರ ಮಂದಿರದ ಸಿಬ್ಬಂದಿಗಳ ಬದುಕಿನಲ್ಲಿ ನಿಶ್ಚಿತತೆ ಇಲ್ಲದಂತಾಗಿದೆ. ಚಿತ್ರ ಮಂದಿರಗಳು ಪಾಳುಬಿದ್ದ ಕಟ್ಟಡಗಳಂತಾಗಿ ಮಾರ್ಪಡುತ್ತಿದೆ. ಮತ್ತೆ ಆರಂಭಗೊಳ್ಳುವ ಸೂಚನೆಗಳು ಸಹ ದೊರೆಯುತ್ತಿಲ್ಲ. ಎಲ್ಲಾ ಭಾಷೆಯ ಚಿತ್ರರಂಗ ಸ್ತಬ್ಧವಾಗಿದೆ. ಚಿತ್ರೀಕರಣಕ್ಕೆ ಅಣಿಯಾಗಿದ್ದ ಸಿನಿಮಾಗಳೆಲ್ಲವೂ ನಿಂತು ಹೋಗಿವೆ. ಮುಹೂರ್ತ ಆಚರಿಸಲು ಸಿದ್ಧವಾಗಿದ್ದ ಸ್ಟಾರ್‌ಗಳ ಸಿನಿಮಾಗಳು ಮುಂದಕ್ಕೆ ಹೋಗಿವೆ. ಬಿಗ್‌ ಬಜೆಟ್‌ನಲ್ಲಿ ಸಿನಿಮಾ ಮಾಡಲು ಉತ್ಸಾಹ ತೋರಿದ್ದ ನಿರ್ಮಾಪಕರು, ಈಗ ಪರಿಸ್ಥಿತಿ ನೋಡಿಕೊಂಡು ಮುಂದುವರೆಯುವ ನಿರ್ಧಾರಕ್ಕೆ ಬಂದಿದ್ದಾರೆ. 

ಇವತ್ತಿನ ಈ ಪರಿಸ್ಥಿತಿ 2022ರಲ್ಲಿ ಕನ್ನಡ ಚಿತ್ರ ರಂಗದ ಮೇಲೆ ಮೇಲೆ ಪರಿಣಾಮ ಬೀರಲಿದೆ. ಅದರಲ್ಲೂ 2022ರ ಆರಂಭದ ನಾಲ್ಕೈದು ತಿಂಗಳು ಕನ್ನಡ ಚಿತ್ರ ರಂಗ ತುಂಬಾ ನೀರಸವಾಗಿ ಸಾಗುವ ಸಾಧ್ಯತೆ ಇದೆ. ಚಿತ್ರ ಮಂದಿರದ ಮಾಲಿಕರು ಹಾಕು ಕೆಲಸಗಾರರು ಮತ್ತು ಕಲಾವಿದರ ಕುರಿತಾಗಿ ಸರ್ಕಾರ ಅಷ್ಟೊಂದಾಗಿ ಯಾವ ಪರಿಹಾರವನ್ನು ನೀಡಿಲ್ಲ. ಜನರಿಲ್ಲದೆ ನಷ್ಟ ಅನುಭವಿಸುತ್ತಿದ್ದ ಚಿತ್ರ ಮಂದಿರಗಳಿಗೆ ಆರ್ಥಿಕ ಚೇತರಿಕೆ ಎನ್ನುವಂತೆ ಚಿತ್ರ ಮಂದಿರಗಳ ಆಸ್ತಿ ತೆರಿಗೆಯನ್ನು ಸರಕಾರ ಮನ್ನಾ ಮಾಡಿದೆ.

ಪ್ರೇಕ್ಷಕರು ಕ್ರಮೇಣ ಚಿತ್ರ ಮಂದಿರಗಳತ್ತ ಮುಖಮಾಡುತ್ತಾರೆ. ಆದರೆ ಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಮೊದಲು ಕೈ ಹಿಡಿದು ನಡೆಸಿದ ಚಿತ್ರ ಮಂದಿರಗಳತ್ತ  ಒಲವಿರಬೇಕು. ಇಲ್ಲವಾದರೆ ಚಿತ್ರಮಂದಿರದ ಸಿಬ್ಬಂದಿಗಳು ಮತ್ತು ಕೆಲಸಗಾರರು ನಿರುದ್ಯೋಗಿಗಳಾಗುತ್ತಾರೆ.

ಸುಮಾ.ಕಂಚೀಪಾಲ್

Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...