Skip to main content

ಚಿತ್ರಮಂದಿರಗಳತ್ತ ಇರಲಿ ಒಲವು

ಚಿತ್ರಮಂದಿರಗಳತ್ತ ಇರಲಿ ಒಲವು

ಚಿತ್ರಮಂದಿರಗಳು ಮುಚ್ಚಿ ಎರಡು ವರ್ಷಗಳಾಗುತ್ತಾ ಬಂತು. ಎರಡನೇ ಅಲೆಯ ನಂತರ ಏಳುತಿಂಗಳು ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಗಳು ಕಂಡಿಲ್ಲ. ಹೀಗಾಗಿ ಗಾಯದ ಮೇಲೆ ಬರೆ ಎರೆದಂತಾಗಿದೆ. ಇದಾಗಲೆ ಕೆಲವು ಚಿತ್ರ ಮಂದಿರಗಳು ಮುಚ್ಚಿವೆ. ಇನ್ನು ಕೆಲವು ಚಿತ್ರ ಮಂದಿರಗಳು ಅಳಿವಿನ ಅಂಚಿನಲ್ಲಿದೆ. ಸಿನಿ ಪ್ರಿಯರೂ ಸಹ ಕಿರುತೆರೆ ಮತ್ತು ಮೊಬೈಲ್ ಮೂಲಕವೆ ಚಿತ್ರವನ್ನು  ವೀಕ್ಷಿಸಲು ಆರಂಭಿಸಿದ್ದಾರೆ. 

ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಚಿತ್ರಮಂದಿರಗಳ ಪೈಕಿ ಇನ್ನು ಎಷ್ಟೋ ಚಿತ್ರ ಮಂದಿರಗಳು ತೆರೆದಿಲ್ಲ. ಚಿತ್ರಮಂದಿರಗಳು ತೆರೆದರೂ ಸಹ ಪ್ರೇಕ್ಷಕರು ಬರುತ್ತಿಲ್ಲ. ಇದರಿಂದ ಮಾಲಿಕರಿಗೆ ನಷ್ಟವಾಗುತ್ತಿದೆ‌. ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿದರೂ ಸಹ ಅರ್ಧದಷ್ಟು ಜನರನ್ನು ಮಾತ್ರ ಚಿತ್ರ ಮಂದಿರದೊಳಗೆ ಬಿಡಲು ಸೂಚಿಸಲಾಗಿದೆ. ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರು ತಮ್ಮ ಚಿತ್ರಗಳನ್ನು ಒ.ಟಿ.ಟಿ ಯಲ್ಲಿ ಬಿಡುಗಡೆ ಮಾಡಲು ಆಸಕ್ತಿ ಹೊಂದಿದ್ದಾರೆ. ಹೊರತಾಗಿ ಚಿತ್ರಮಂದಿರಗಳಿಗೆ ತಮ್ಮ ಚಿತ್ರ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. 

ಚಿತ್ರ ಮಂದಿರದ ಸಿಬ್ಬಂದಿಗಳ ಬದುಕಿನಲ್ಲಿ ನಿಶ್ಚಿತತೆ ಇಲ್ಲದಂತಾಗಿದೆ. ಚಿತ್ರ ಮಂದಿರಗಳು ಪಾಳುಬಿದ್ದ ಕಟ್ಟಡಗಳಂತಾಗಿ ಮಾರ್ಪಡುತ್ತಿದೆ. ಮತ್ತೆ ಆರಂಭಗೊಳ್ಳುವ ಸೂಚನೆಗಳು ಸಹ ದೊರೆಯುತ್ತಿಲ್ಲ. ಎಲ್ಲಾ ಭಾಷೆಯ ಚಿತ್ರರಂಗ ಸ್ತಬ್ಧವಾಗಿದೆ. ಚಿತ್ರೀಕರಣಕ್ಕೆ ಅಣಿಯಾಗಿದ್ದ ಸಿನಿಮಾಗಳೆಲ್ಲವೂ ನಿಂತು ಹೋಗಿವೆ. ಮುಹೂರ್ತ ಆಚರಿಸಲು ಸಿದ್ಧವಾಗಿದ್ದ ಸ್ಟಾರ್‌ಗಳ ಸಿನಿಮಾಗಳು ಮುಂದಕ್ಕೆ ಹೋಗಿವೆ. ಬಿಗ್‌ ಬಜೆಟ್‌ನಲ್ಲಿ ಸಿನಿಮಾ ಮಾಡಲು ಉತ್ಸಾಹ ತೋರಿದ್ದ ನಿರ್ಮಾಪಕರು, ಈಗ ಪರಿಸ್ಥಿತಿ ನೋಡಿಕೊಂಡು ಮುಂದುವರೆಯುವ ನಿರ್ಧಾರಕ್ಕೆ ಬಂದಿದ್ದಾರೆ. 

ಇವತ್ತಿನ ಈ ಪರಿಸ್ಥಿತಿ 2022ರಲ್ಲಿ ಕನ್ನಡ ಚಿತ್ರ ರಂಗದ ಮೇಲೆ ಮೇಲೆ ಪರಿಣಾಮ ಬೀರಲಿದೆ. ಅದರಲ್ಲೂ 2022ರ ಆರಂಭದ ನಾಲ್ಕೈದು ತಿಂಗಳು ಕನ್ನಡ ಚಿತ್ರ ರಂಗ ತುಂಬಾ ನೀರಸವಾಗಿ ಸಾಗುವ ಸಾಧ್ಯತೆ ಇದೆ. ಚಿತ್ರ ಮಂದಿರದ ಮಾಲಿಕರು ಹಾಕು ಕೆಲಸಗಾರರು ಮತ್ತು ಕಲಾವಿದರ ಕುರಿತಾಗಿ ಸರ್ಕಾರ ಅಷ್ಟೊಂದಾಗಿ ಯಾವ ಪರಿಹಾರವನ್ನು ನೀಡಿಲ್ಲ. ಜನರಿಲ್ಲದೆ ನಷ್ಟ ಅನುಭವಿಸುತ್ತಿದ್ದ ಚಿತ್ರ ಮಂದಿರಗಳಿಗೆ ಆರ್ಥಿಕ ಚೇತರಿಕೆ ಎನ್ನುವಂತೆ ಚಿತ್ರ ಮಂದಿರಗಳ ಆಸ್ತಿ ತೆರಿಗೆಯನ್ನು ಸರಕಾರ ಮನ್ನಾ ಮಾಡಿದೆ.

ಪ್ರೇಕ್ಷಕರು ಕ್ರಮೇಣ ಚಿತ್ರ ಮಂದಿರಗಳತ್ತ ಮುಖಮಾಡುತ್ತಾರೆ. ಆದರೆ ಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಮೊದಲು ಕೈ ಹಿಡಿದು ನಡೆಸಿದ ಚಿತ್ರ ಮಂದಿರಗಳತ್ತ  ಒಲವಿರಬೇಕು. ಇಲ್ಲವಾದರೆ ಚಿತ್ರಮಂದಿರದ ಸಿಬ್ಬಂದಿಗಳು ಮತ್ತು ಕೆಲಸಗಾರರು ನಿರುದ್ಯೋಗಿಗಳಾಗುತ್ತಾರೆ.

ಸುಮಾ.ಕಂಚೀಪಾಲ್

Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ. ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ. ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ? ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು. ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತ...

ನಾಲ್ಕು ವರುಷದ ಖುಷಿ

ಜುಲೈ 6, 2021. ಕಂಚೀಪಾಲ್ ಬ್ಲಾಗ್ ಸ್ಪಾಟ್‌ನಲ್ಲಿ ಅಂದು ನಾನು ನನ್ನ ಮೊದಲ ಬರಹ ಪ್ರಕಟಿಸಿದ್ದೆ. ಓದುಗರು ಇಷ್ಟವಾದರೆ ಓದುತ್ತಾರೆ, ಇಲ್ಲವೆ ಪ್ರಯತ್ನ ಜಾರಿಯಲ್ಲಿರಲಿ. ನಾನಂತೂ ಬರಿಲೇಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿಮ್ಮಿಂದ ನನಗೆ ಸಿಕ್ಕ ಸ್ಪಂದನೆ ಬಹಳ ದೊಡ್ಡದು. ಒಮ್ಮೆ ಓದಿದವರು ಮತ್ತೊಮ್ಮೆ ಓದಿ ಇಷ್ಟವಾದ ಬರಹಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ನಾನು ಸಿಕ್ಕಾಗೆಲ್ಲ 'ನೀ ಬರೆದದನ್ನು ಓದಿದೆ, ತುಂಬಾ ಚೆನ್ನಾಗಿತ್ತು. ಹೀಗೆ ಬರಿತಾ ಇರು' ಎಂದು ಪ್ರೋತ್ಸಾಹಿಸಿದವರು ಹಲವರಿದ್ದೀರಿ. ಮನೆ, ಕಾಲೇಜು, ಆಫೀಸ್ ಎಲ್ಲ ಕಡೆಗಳಲ್ಲಿ ಖುಷಿಯಿಂದ ಬರೆದೆ. ಇಂದು ಇದೇ ಅಕ್ಷರಗಳು ನನ್ನ ಬದುಕಿನ ಕೈಹಿಡಿದು ಮುನ್ನಡೆಸುತ್ತಿವೆ. ಮೊದಲ ಉದ್ಯೋಗ ಸಿಕ್ಕಾಗ ಮತ್ತು ನನ್ನ ಮುಂದಿನ ಹೆಜ್ಜೆಗೂ ಇದೇ ಬ್ಲಾಗ್ ಕಾರಣ ಎಂದು ಕೆಲಸ ಕೊಟ್ಟವರೂ ಹೇಳಿದ್ದು ಇನ್ನೊಂದು ಖುಷಿ. ಇಂದಿಗೆ ಈ ಬ್ಲಾಗ್ ಆರಂಭವಾಗಿ 4 ವರ್ಷಗಳು ಸಂದಿವೆ. ಹಲವರು ಸಾಮಾಜಿಕ ಕಾರ್ಯಕ್ರಮ, ಸ್ವ ಉದ್ಯೋಗಗಳಿಗೆ ಸಂಬಂಧಿಸಿದ ಬರಹಗಳನ್ನು ಇದೇ ಬ್ಲಾಗ್ ಮೂಲಕ ಸಂಪರ್ಕಿಸಿ ಬರೆಸಿಕೊಂಡಿದ್ದಾರೆ. ಕೆಲವರಿಗೆ ಉಚಿತವಾಗಿ ಬರೆದುಕೊಟ್ಟರೆ, ಇನ್ನು ಕೆಲವರು ಅವರಾಗೇ ಹಣ ತಲುಪಿಸಿದ್ದೂ ಉಂಟು.  ಈ 4 ವರ್ಷಗಳಲ್ಲಿ ಹತ್ತೊಂಬತ್ತು ಸಾವಿರ ಜನರು ನನ್ನ ಬ್ಲಾಗ್ ಓದಿದ್ದಾರೆ. ಅದರಲ್ಲಿ ನೀವೂ ಒಬ್ಬರು. 21 ಸಾವಿರ ಜನರನ್ನು ಈ ನಾಲ್ಕು ವರ್ಷಗಳಲ್ಲಿ ತಲುಪಬೇಕು ಎಂಬ ಸಂಕಲ್ಪ ಆಗ...