Skip to main content

ರುದ್ರಪ್ರಯಾಗದ ಭಯಾನಕ ನರಭಕ್ಷಕ


ರುದ್ರಪ್ರಯಾಗ ಭಯಾನಕ ನರಭಕ್ಷಕ.

ದೃಶ್ಯಗಳು ಕಣ್ಣೆದುರು ಬಂದಾಗ ನಾವು ಅದಕ್ಕೆ ಪ್ರತಿಯಾದ ಪ್ರತಿಕ್ರಿಯೆ ನೀಡುತ್ತೇವೆ. ಆದರೆ ಕೇವಲ‌ ಬರವಣಿಗೆಗೆ ನಾವು ಅಷ್ಟು ಪ್ರಖರವಾದ ಪ್ರತಿಕ್ರಿಯೆಗೆ ಒಳಪಡುವಂತೆ ಮಾಡುವ ಬರವಣಿಗೆ ಅದು ತೇಜಸ್ವಿ ಅವರದ್ದು.

ರುದ್ರಪ್ರಯಾಗದ ಭಯಾನಕ ನರಭಕ್ಷಕ ಎಂಬ ಒಂದು ಹುಲಿಯ ಕುರಿತಾದ ಕಾದಂಬರಿ ಅದು ಜಿಮ್ ಕಾರ್ಬೆಟ್ ಎಂಬ ಬೇಟೆಗಾರನ "Man eating lepord of rudraprayaga" ಎಂಬ ಪುಸ್ತಕದ ಅನುವಾದಿತ ಕೃತಿ.

ಆ ಹುಲಿ ಪ್ರತಿನಿತ್ಯವೂ ಒಂದಲ್ಲಾ ಒಂದು ಜೀವವನ್ನು ಬಲಿ ತೆಗೆದುಕೊಳ್ಳದೇ ಬಿಡುತ್ತಿರಲಿಲ್ಲ.
ನಾವು ಪುಸ್ತಕ ಓದುತ್ತಿದ್ದೇವೆ ಎಂದಾದರೆ ಹುಲಿ ನಮ್ಮ ಸುತ್ತಲೇ ಓಡಾಡುತ್ತಿದೆ ಎಂದು ಅನಿಸುವಷ್ಟರ ಮಟ್ಟಿಗೆ ಇದು ನಮ್ಮ ಮೇಲೆ ಪ್ರಭಾವ ಬೀರುತ್ತದೆ.
ಈ ಕಾದಂಬರಿಯಲ್ಲಿ ಮುಖ್ಯವಾಗಿ ಹುಲಿಯನ್ನು ಬೇಟೆ ಆಡುವುದಕ್ಕಾಗಿ ಹೊಂಚುಹಾಕಿದ ಬೇಟೆಗಾರ ಹುಲಿಯ ಜಾಡನ್ನು ಹಿಂಬಾಲಿಸುವ ಪ್ರತೀ ಸನ್ನಿವೇಶಗಳೂ ಕಥಾವಸ್ತುವಾಗಿದೆ. ಸಂಜೆ ಆರರ ನಂತರ ಕತ್ತಲು ಆವರಿಸುವ ಹೊತ್ತಿಗಾಗಲೇ ಎಲ್ಲರು ಮನೆ ಸೇರಿಕೊಂಡು ಬಿಡಬೇಕು ಇಲ್ಲವೆಂದರೆ ಆ ಹುಲಿಯ ಅಂದಿನ ಹೊಟ್ಟೆ ತುಂಬಿಸುವ ಜೀವಿ ಇವರೇ ಆಗಿರತ್ತಾರೆ ಎಂಬುದು ಖಚಿತ.

ಮನೆಯಹತ್ತಿರದಲ್ಲಿ ರಾತ್ರಿ ಹೊತ್ತು ಮೂತ್ರವಿಸರ್ಜಿಸಲೆಂದು ಹೋದವರು ತಿರುಗಿ ಬರಲಿಲ್ಲ. ಕಟ್ಟಿಗೆ ತರಲು ಹೋದವರ ಪತ್ತೆ ಇಲ್ಲ. ಮನೆಯಂಗಳದಲ್ಲೆ ಆಡುತ್ತಿದ್ದ ಪುಟ್ಟ ಮಗುವೂ ಸಹ ನಾಪತ್ತೆ. ಮೊದಲೆಲ್ಲ ಇದು ಒಂದು ಭೂತದ ಕೈವಾಡ ಎಂದು ನಂಬಿದ್ದ ಹಳ್ಳಿಯ ಜನರಿಗೆ. ಹುಲಿಯ ಹೆಜ್ಜೆ ಗುರುತು ಸಾಕ್ಷಿಯಾಗುತ್ತದೆ.
ಪುಸ್ತಕ ಓದುತ್ತಿದ್ದ ನಮಗೂ ಬೇಟೆಗಾರನೊಟ್ಟಿಗೇ ಅಲೆಯುತ್ತಿದ್ದ ಅನುಭವ ಆಗುವುದಂತೂ ನಿಜ. ರಾತ್ರಿ ಪೂರ್ತಿ ಮರದ ಕೆಳಗೆ ಮೇಕೆ ಕಟ್ಟಿ ಹುಲಿಯ ಬರುವಿಕೆಗಾಗಿ ಕಾದು ಕುಳಿತ ಪ್ರಸಂಗ ವಿವರಿಸುತ್ತಿದ್ದರೆ, ನಾವು ಅದೇ ಮರದ ಮೇಲೆ ಕೂತು ಪುಸ್ತಕ ಓದುತ್ತಿರುವಂತ ಮಾಯಾ ಲೋಕ ಸೃಷ್ಟಿಯಾಗುತ್ತದೆ.

ಎರಡು ವರ್ಷಗಳಿಂದ ಹುಡುಕಾಡಿ
ಹುಲಿಯನ್ನು ಕೊಂದಲ್ಲಿಗೆ ಈ ಕೃತಿ ಕೊನೆಯಾಗುತ್ತದೆ.

ಸುಮಾ.ಕಂಚೀಪಾಲ್

Comments

Post a Comment

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ. ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ. ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ? ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು. ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತ...

ನಾಲ್ಕು ವರುಷದ ಖುಷಿ

ಜುಲೈ 6, 2021. ಕಂಚೀಪಾಲ್ ಬ್ಲಾಗ್ ಸ್ಪಾಟ್‌ನಲ್ಲಿ ಅಂದು ನಾನು ನನ್ನ ಮೊದಲ ಬರಹ ಪ್ರಕಟಿಸಿದ್ದೆ. ಓದುಗರು ಇಷ್ಟವಾದರೆ ಓದುತ್ತಾರೆ, ಇಲ್ಲವೆ ಪ್ರಯತ್ನ ಜಾರಿಯಲ್ಲಿರಲಿ. ನಾನಂತೂ ಬರಿಲೇಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿಮ್ಮಿಂದ ನನಗೆ ಸಿಕ್ಕ ಸ್ಪಂದನೆ ಬಹಳ ದೊಡ್ಡದು. ಒಮ್ಮೆ ಓದಿದವರು ಮತ್ತೊಮ್ಮೆ ಓದಿ ಇಷ್ಟವಾದ ಬರಹಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ನಾನು ಸಿಕ್ಕಾಗೆಲ್ಲ 'ನೀ ಬರೆದದನ್ನು ಓದಿದೆ, ತುಂಬಾ ಚೆನ್ನಾಗಿತ್ತು. ಹೀಗೆ ಬರಿತಾ ಇರು' ಎಂದು ಪ್ರೋತ್ಸಾಹಿಸಿದವರು ಹಲವರಿದ್ದೀರಿ. ಮನೆ, ಕಾಲೇಜು, ಆಫೀಸ್ ಎಲ್ಲ ಕಡೆಗಳಲ್ಲಿ ಖುಷಿಯಿಂದ ಬರೆದೆ. ಇಂದು ಇದೇ ಅಕ್ಷರಗಳು ನನ್ನ ಬದುಕಿನ ಕೈಹಿಡಿದು ಮುನ್ನಡೆಸುತ್ತಿವೆ. ಮೊದಲ ಉದ್ಯೋಗ ಸಿಕ್ಕಾಗ ಮತ್ತು ನನ್ನ ಮುಂದಿನ ಹೆಜ್ಜೆಗೂ ಇದೇ ಬ್ಲಾಗ್ ಕಾರಣ ಎಂದು ಕೆಲಸ ಕೊಟ್ಟವರೂ ಹೇಳಿದ್ದು ಇನ್ನೊಂದು ಖುಷಿ. ಇಂದಿಗೆ ಈ ಬ್ಲಾಗ್ ಆರಂಭವಾಗಿ 4 ವರ್ಷಗಳು ಸಂದಿವೆ. ಹಲವರು ಸಾಮಾಜಿಕ ಕಾರ್ಯಕ್ರಮ, ಸ್ವ ಉದ್ಯೋಗಗಳಿಗೆ ಸಂಬಂಧಿಸಿದ ಬರಹಗಳನ್ನು ಇದೇ ಬ್ಲಾಗ್ ಮೂಲಕ ಸಂಪರ್ಕಿಸಿ ಬರೆಸಿಕೊಂಡಿದ್ದಾರೆ. ಕೆಲವರಿಗೆ ಉಚಿತವಾಗಿ ಬರೆದುಕೊಟ್ಟರೆ, ಇನ್ನು ಕೆಲವರು ಅವರಾಗೇ ಹಣ ತಲುಪಿಸಿದ್ದೂ ಉಂಟು.  ಈ 4 ವರ್ಷಗಳಲ್ಲಿ ಹತ್ತೊಂಬತ್ತು ಸಾವಿರ ಜನರು ನನ್ನ ಬ್ಲಾಗ್ ಓದಿದ್ದಾರೆ. ಅದರಲ್ಲಿ ನೀವೂ ಒಬ್ಬರು. 21 ಸಾವಿರ ಜನರನ್ನು ಈ ನಾಲ್ಕು ವರ್ಷಗಳಲ್ಲಿ ತಲುಪಬೇಕು ಎಂಬ ಸಂಕಲ್ಪ ಆಗ...