Skip to main content

ರವಿವರ್ಮನ ಕುಂಚದಲ್ಲಿ ದೇವರು.



ಪೂಜಿಸುವ ದೇವಿಯ ಬಾಹ್ಯ ರೂಪ.

"ಅರ್ಚಕಸ್ಯ ಪ್ರಭಾವೇನ ಶೀಲಾ ಭವತಿ ಶಂಕರ" ಎಂಬ ಮಾತಿದೆ. ಮನುಷ್ಯನು ತನ್ನ ಭಕ್ತಿಯಿಂದ ಕಲ್ಲನ್ನು ದೇವರನ್ನಾಗಿ ಕಾಣಬಹುದು, ಏಕಲವ್ಯ ಕಲಿತ ವಿದ್ಯೆಯ ಹಾಗೆ.
ವರ್ತಮಾನದಲ್ಲಿ ಹಲವಾರು ಅಡೆತಡೆಗಳಿಂದ ದೇವಾಲಯದ ಬಾಗಿಲು ಮುಚ್ಚಿದೆ.

ಮನದ ಭಕ್ತಿಯು ಗುಡಿಯ ಬಾಗಿಲು ತಟ್ಟುವ ಅವಕಾಶ ಕಡಿಮೆಯಾಗಿದೆ. ಸಾಲುಗಟ್ಟಿ ನಿಂತು ದೇವರ ದರ್ಶನ ಮಾಡುವ ಭಾಗ್ಯ ಇಲ್ಲವಾಗಿದೆ‌. ಹತ್ತು ಹಲವು ಆಯಾಮಗಳಲ್ಲಿ ದೇವರನ್ನು ತಲುಪುವ ಪ್ರಯತ್ನ ಮನುಷ್ಯ ಮಾಡುತ್ತಿದ್ದಾನೆ‌.  ಅದು ಎಲ್ಲಿಯವರೆಗೆ ಎಂದರೆ ಬೆಳಗಿನ ಅವಧಿಯ ನೇರ ಪ್ರಸಾರದಲ್ಲಿ ದೇವರ ದರ್ಶನ ಮಾಡುವ ಹಂತಕ್ಕೆ ಬಂದು ತಲುಪಿದ್ದಾನೆ‌.
ರಾಜ ಶಂತನು ಗಂಗಾ ಮಾತೆಯನ್ನು ತಡೆಯುತ್ತಿರುವ ದೃಶ್ಯ. ( ರವಿವರ್ಮ ಪೇಂಟಿಂಗ್)

ರವಿವರ್ಮ ಕುಂಚದಲ್ಲಿ ಮೂಡಿದ ದೇವರ ಚಿತ್ರವನ್ನು ಇಂದು ಹಲವೆಡೆ ಪೂಜಿಸಲಾಗುತ್ತಿದೆ. ನಿಜವಾಗಿಯೂ ಆ ರೂಪ ಓರ್ವ ವೇಶ್ಯೆಯ ಅಲಂಕಾರದಿಂದ ಬಂದದ್ದು. ರವಿವರ್ಮ ಎಂಬ ಚಿತ್ರಕಾರನು ಆ ಹೆಣ್ಣಿಗೆ ಅಡಿಯಿಂದ ಮುಡಿಯವರೆಗೂ ಅಲಂಕರಿಸಿ ಅವಳನ್ನು ಪೂಜೆಮಾಡಿ
ರಚಿಸಿದ ಚಿತ್ರ ಚರ್ಚೆಗೆ ಗ್ರಾಸವಾಗಿತ್ತು. ರಂಗ ರಸಿಯಾ ಎನ್ನುವ ಚಲನಚಿತ್ರವನ್ನು ನೋಡಿದ್ದಲ್ಲಿ ಇದರ ಬಗ್ಗೆ ತಿಳಿದಿರಬಹುದು. ಯೂಟ್ಯೂಬ್ ನಲ್ಲಿಯೂ ಈ ಚಿತ್ರ ನೋಡಲು ಅವಕಾಶ ಇದೆ. ಪುರಾಣದ ಕಥೆಗಳನ್ನು ಆಧರಿಸಿ ಅ ರೂಪಗಳನ್ನು ಕಲ್ಪಿಸಿಕೊಂಡು ತಾನೆ ಸೃಷ್ಟಿಸಿದ ರವಿವರ್ಮನ ಕಲ್ಪನೆಗಳನ್ನು ನಾವು ಪೂಜಿಸುತ್ತಿದ್ದೇವೆ.

  ಮಾತೆ ಸರಸ್ವತಿ - ರವಿವರ್ಮ 

ದೇವರನ್ನು ಮಾರಬಾರದು ಎನ್ನುವ ಚಿಂತನೆಗಳು ಹುಟ್ಟಿಕೊಂಡಿದ್ದವು.
ಆದರೆ ಇಂದು ಈ ಪೋಟೋ ನೋಡಿದ ತಕ್ಷಣ ವಾಟ್ಸಾಪ್ ಫೇಸ್ಬುಕ್ ಗಳಲ್ಲಿ  ತಕ್ಷಣ ಶೇರ್ ಮಾಡಿ ನಿಮಗೆ ಒಳ್ಳೆಯದಾಗುತ್ತದೆ ಎಂಬ ಸಂದೇಶವನ್ನು ಮನುಷ್ಯನೊಬ್ಬ ರವಾನಿಸುವ ಹಂತಕ್ಕೆ ದೇವರು ಹಂಚಿಕೆಯ ವಸ್ತುವಾಗಿದ್ದಾನೆ‌.

ಸುಮಾ.ಕಂಚೀಪಾಲ್

( ರಂಗರಸಿಯಾ ಚಿತ್ರ ನೋಡಿ)

Comments

Post a Comment

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...