Skip to main content

ಕಾಲ್ಪನಿಕ ಸಂದರ್ಶನ



ಕಳೆದ ಎರಡು ಮೂರು ವರ್ಷಗಳಿಂದ ಮಳೆಯ ಅಬ್ಬರಕ್ಕೆ ಎಲ್ಲೆಡೆ ಭೂ ಕುಸಿತ ಆಗ್ತಾ ಇದೆ. ಈ ಕುರಿತು ಪರಿಸರ ತಜ್ಞರನ್ನು, ಭೂ ಶಾಸ್ತ್ರಜ್ಞರನ್ನು ಸಂದರ್ಶನ ಮಾಡಿಯಾಗಿದೆ. ಈಗ ಭೂಮಿತಾಯಿ ಈ ಕುರಿತು ಏನು ಹೇಳ್ತಾಳೆ ನೋಡೋಣ. ಅವಳನ್ನೇ ಕರೆದು ವಿಶೇಷ ಸಂದರ್ಶನ ಮಾಡುತ್ತಿದ್ದೇವೆ. ಮೊದ ಮೊದಲು ನಮ್ಮೊಟ್ಟಿಗೆ ಮಾತನಾಡಲು ನಿರಾಕರಿಸಿದರು ಒತ್ತಾಯಕ್ಕೆ ಮಣಿದು ಭೂ ತಾಯಿ ಒಪ್ಪಿಕೊಂಡಿದ್ದಾರೆ. ಈ ಒಂದು ಕಾಲ್ಪನಿಕ ಸಂದರ್ಶನ ನಿಮಗಾಗಿ.

ಮನುಷ್ಯ: ಸಮಸ್ತ ಜೀವ ಸಂಕುಲವನ್ನು  ತನ್ನ ಒಡಲೊಳಗಿಟ್ಟು ಸಲಹುವ ಭೂ ತಾಯಿಯ ಚರಣಗಳಿಗೆ ನಮಿಸಿ ಸ್ವಾಗತಿಸುತ್ತಿದ್ದೇನೆ. ಮಾತೆ ನೀವು ಕಳೆದ ಎರಡು ವರ್ಷಗಳಿಂದ ಯಾಕೆ ಕೋಪಗೊಳ್ಳುತ್ತಿದ್ದೀರಿ?

ಭೂಮಿ ತಾಯಿ: ಪ್ರತಿ ವರ್ಷ ನಾನು ಶಾಂತಳಾಗಿಯೇ ಇರುತ್ತಿದ್ದೆ. ಉತ್ತಿ ಬಿತ್ತಿ ಬೆಳೆತೆಗೆಯಲು ನನ್ನ ಮೈ ಮನೆಗಳನ್ನು ನೀಡುತ್ತಿದೆ. ಪುಟ್ಟ ಮಕ್ಕಳಂತೆ ಮನುಜ ಸಂಕುಲವನ್ನು ಸಲಹುತ್ತಿದ್ದೆ. ಆದರೆ ಕಳೆದ ಎರಡು ಮೂರು ವರ್ಷಗಳಿಂದ ನನಗೂ ನನ್ನ ಮಕ್ಕಳ ಮೇಲೆ ಕೋಪ ಬಂದಿದೆ. ಮನುಷ್ಯರೇ ಮಾಡುತ್ತಿರುವ ಕೃತ್ಯಗಳ ಫಲವಾಗಿ ನಾನು ಕುಪಿತಳಾಗಿದ್ದೇನೆ. ಮನುಜ ಮತ್ತೆ ತನ್ನ ತಪ್ಪನ್ನು ಅರಿತರೆ ನಾನು ಸಮಾಧಾನ ಪಡುತ್ತೇನೆ.

ಮನುಷ್ಯ: ಭೂಮಿ ತಾಯಿಯಾದ ನೀವೆ ಕೋಪಿಸಿಕೊಂಡರೆ ಹೇಗೆ? ಸಣ್ಣ ಪುಟ್ಟ ಶಿಕ್ಷೆ ನೀಡಿ ಕ್ಷಮಿಸಿ ಬಿಡುವುದು ಒಳ್ಳೆಯದಲ್ಲವೇ?

ಭೂ ತಾಯಿ: ನಾನು ಹಲವು ವರ್ಷಗಳಿಂದ ನನ್ನದೇ ಮಕ್ಕಳು ಎಂಬ ಪ್ರೀತಿಗೆ ನಿಮ್ಮನ್ನು ಕ್ಷಮಿಸುತ್ತಲೇ ಬಂದೆ. ಆದರೆ ನೀವು ನನ್ನ ಒಡಲನ್ನು ಬರಡು ಮಾಡುತ್ತಾ ಹೋಗಿದ್ದೀರಿ. ಈಗಲೂ ನನ್ನ ನೋವಿಗಲ್ಲ ನಿಮ್ಮ ವಳಿತಿಗಾಗಿ ಹೇಳುತ್ತಿದ್ದೇನೆ.‌ ನಿಮ್ಮ ರಕ್ಷಣೆಗಾಗೆ ಕಷ್ಟ ಪಡುತ್ತಿದ್ದೇನೆ. " ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ " ಕೆಟ್ಟ ಮಕ್ಕಳು ಹುಟ್ಟಬಹುದು ಆದರೆ ಕೆಟ್ಟ ತಾಯಿ ಇರಲಾರಳು. ನಿಮ್ಮನ್ನು ನಾನು ಎಂದಿಗೂ ರಕ್ಷಿಸದೆ ಕೈ ಬಿಡಲಾರೆ. ಆದರೆ ಅಭಿವೃದ್ಧಿ ಹೆಸರಿನಲ್ಲಿ ಹೆಚ್ಚುತ್ತಿರುವ ನಿಮ್ಮ ಕೆಡುಕಿನ ಆಟವನ್ನು ಸಹಿಸಹಿಸದೆ ಈ ನಿರ್ಧಾರಕ್ಕೆ ಬರುವಂತಾಯಿತು.

ಮನುಷ್ಯ: ನಮ್ಮ ಹೊಸ ಚಿಂತನೆಗಳಿಂದ ನಿನಗೊಂದು ಹೊಸ ರೂಪ ಕೊಡುತ್ತಿದ್ದೇವೆ ಇ ಕುರಿತು ನಿನ್ನ ಅನಿಸಿಕೆ ಏನು?

ಭೂಮಿತಾಯಿ: ನಿಮ್ಮ ಹೊಸ ಚಿಂತನೆಗಳು ಮಿತಿಯನ್ನು ಕಳೆದು ಕೊಂಡಿದೆ. ಭೂಮಿತೂಕದ ಸಹನೆ ಎಂಬ ಮಾತೇ ಇರುವಾಗ ನನ್ನ ತಾಳ್ಮೆಯನ್ನೇ ನೀವು ಮೀರಿದ್ದೀರಿ. ಅನಗತ್ಯ ಅವಶ್ಯಕತೆಗಳನ್ನು ಸೃಷ್ಟಿಸಿಕೊಂಡಿದ್ದೀರಿ. ಚತುಷ್ಪತ ರಸ್ತೆ, ಇಲ್ಲ ಅಲ್ಲದ ರಲ್ವೇ ಮಾರ್ಗಗಳು, ಅಣು ವಿದ್ಯುತ್ ಕೇಂದ್ರಗಳು ಗಣಿಗಾರಿಕೆ, ಅವೈಜ್ಞಾನಿಕ ಅಣೆಕಟ್ಟುಗಳು, ಅರಣ್ಯನಾಶ, ಈ ಎಲ್ಲಾ ನಿಮ್ಮ ಹೊಸ‌ಚಿಂತನೆಗಳಿಂದ ನಾನು ದಣಿದು ಹೋಗಿದ್ದೇನೆ. ಇದೇ ನನ್ನ ಅನಿಸಿಕೆ.

ಮನುಷ್ಯ: ನಿನಗೆ ಸಾವಿಲ್ಲ ಎಂದು ಕೇಳಲ್ಪಟ್ಟಿದ್ದೇವೆ ನಿಜವೇ?

ಭೂಮಿತಾಯಿ: ಎಲ್ಲರೂ ಹಾಗೆ ಅಂದು ಕೊಂಡಿದ್ದೀರಿ ಮತ್ತು ಅದು ನಿಜವೂ ಇರಬಹುದು. ಆದರೆ ಇತ್ತೀಚೆಗೆ ನನ್ನ ಆರೋಗ್ಯ ಹದಗೆಟ್ಟ ಪರಿಣಾಮವಾಗಿ ನಾನು ಸಾಗಬಹುದು ಎಂಬ ಸಂಶಯ ನನ್ನಲ್ಲಿ ಮನೆ ಮಾಡುತ್ತಿದೆ. ನನ್ನ ಒಡಲೊಳಗಿನ ಸತ್ವವೆಲ್ಲ ಬರಿದಾಗಿ ನಾನು ಖಾಲಿಯಾಗುತ್ತಿದ್ದೇನೆ. ಸತ್ವವಿಲ್ಲದೆ ಬಸವಳಿದು ಹೋಗಿದ್ದೇನೆ. ನನ್ನ ಕಣ್ಣೀರಿನ ಪ್ರವಾಹಕ್ಕೆ ನನ್ನ ಆಭರಣಗಳಾದ ಪರ್ವತ ಶಿಖರಗಳು ಕೊಚ್ಚಿಹೋಗುತ್ತಿವೆ. ಎಷ್ಟು ಅಶಕ್ತಳಾಗಿದ್ದೇನೆ ಎಂದರೆ ನನ್ನ ಮೈಯನ್ನೇ ಭಲವಾಗಿ ಹಿಡಿದುಕೊಳ್ಳಲಾಗದೆ ಒಂದೊಂದೇ ಪಾರ್ಶ್ವಗಳನ್ನು ಕಳೆದುಕೊಂಡಿದ್ದೇನೆ. ಹೀಗೆ ಆದರೆ ನನ್ನ ಅಳಿವು ಖಚಿತ.

ಸುಮಾ.ಕಂಚೀಪಾಲ್

ವಿಶ್ವವಾಣಿ ಪ್ರಕಟಿತ ಬರಹ


Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ. ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ. ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ? ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು. ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತ...

ನಾಲ್ಕು ವರುಷದ ಖುಷಿ

ಜುಲೈ 6, 2021. ಕಂಚೀಪಾಲ್ ಬ್ಲಾಗ್ ಸ್ಪಾಟ್‌ನಲ್ಲಿ ಅಂದು ನಾನು ನನ್ನ ಮೊದಲ ಬರಹ ಪ್ರಕಟಿಸಿದ್ದೆ. ಓದುಗರು ಇಷ್ಟವಾದರೆ ಓದುತ್ತಾರೆ, ಇಲ್ಲವೆ ಪ್ರಯತ್ನ ಜಾರಿಯಲ್ಲಿರಲಿ. ನಾನಂತೂ ಬರಿಲೇಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿಮ್ಮಿಂದ ನನಗೆ ಸಿಕ್ಕ ಸ್ಪಂದನೆ ಬಹಳ ದೊಡ್ಡದು. ಒಮ್ಮೆ ಓದಿದವರು ಮತ್ತೊಮ್ಮೆ ಓದಿ ಇಷ್ಟವಾದ ಬರಹಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ನಾನು ಸಿಕ್ಕಾಗೆಲ್ಲ 'ನೀ ಬರೆದದನ್ನು ಓದಿದೆ, ತುಂಬಾ ಚೆನ್ನಾಗಿತ್ತು. ಹೀಗೆ ಬರಿತಾ ಇರು' ಎಂದು ಪ್ರೋತ್ಸಾಹಿಸಿದವರು ಹಲವರಿದ್ದೀರಿ. ಮನೆ, ಕಾಲೇಜು, ಆಫೀಸ್ ಎಲ್ಲ ಕಡೆಗಳಲ್ಲಿ ಖುಷಿಯಿಂದ ಬರೆದೆ. ಇಂದು ಇದೇ ಅಕ್ಷರಗಳು ನನ್ನ ಬದುಕಿನ ಕೈಹಿಡಿದು ಮುನ್ನಡೆಸುತ್ತಿವೆ. ಮೊದಲ ಉದ್ಯೋಗ ಸಿಕ್ಕಾಗ ಮತ್ತು ನನ್ನ ಮುಂದಿನ ಹೆಜ್ಜೆಗೂ ಇದೇ ಬ್ಲಾಗ್ ಕಾರಣ ಎಂದು ಕೆಲಸ ಕೊಟ್ಟವರೂ ಹೇಳಿದ್ದು ಇನ್ನೊಂದು ಖುಷಿ. ಇಂದಿಗೆ ಈ ಬ್ಲಾಗ್ ಆರಂಭವಾಗಿ 4 ವರ್ಷಗಳು ಸಂದಿವೆ. ಹಲವರು ಸಾಮಾಜಿಕ ಕಾರ್ಯಕ್ರಮ, ಸ್ವ ಉದ್ಯೋಗಗಳಿಗೆ ಸಂಬಂಧಿಸಿದ ಬರಹಗಳನ್ನು ಇದೇ ಬ್ಲಾಗ್ ಮೂಲಕ ಸಂಪರ್ಕಿಸಿ ಬರೆಸಿಕೊಂಡಿದ್ದಾರೆ. ಕೆಲವರಿಗೆ ಉಚಿತವಾಗಿ ಬರೆದುಕೊಟ್ಟರೆ, ಇನ್ನು ಕೆಲವರು ಅವರಾಗೇ ಹಣ ತಲುಪಿಸಿದ್ದೂ ಉಂಟು.  ಈ 4 ವರ್ಷಗಳಲ್ಲಿ ಹತ್ತೊಂಬತ್ತು ಸಾವಿರ ಜನರು ನನ್ನ ಬ್ಲಾಗ್ ಓದಿದ್ದಾರೆ. ಅದರಲ್ಲಿ ನೀವೂ ಒಬ್ಬರು. 21 ಸಾವಿರ ಜನರನ್ನು ಈ ನಾಲ್ಕು ವರ್ಷಗಳಲ್ಲಿ ತಲುಪಬೇಕು ಎಂಬ ಸಂಕಲ್ಪ ಆಗ...