Skip to main content

ಬೇರಿನ‌ ಅರಿವು

ಪರಿಸರದ ಉಳಿವಿಗೆ  ಬೇರಿನ ಅರಿವು.

ಮಾನವ ಪರಿಸರ ಸ್ನೇಹಿಯಾಗದ ಹೊರತು ಪರಿಸರ ಮಾನವನನ್ನು ಪ್ರೀತಿಸುವುದಿಲ್ಲ.
‌ಪ್ರತಿಯೊಬ್ಬ ಮನುಷ್ಯನಿಗೂ ಪರಿಸರ ರಕ್ಷಣೆ ಮಾಡಬೇಕೆಂಬ ವಾಕ್ಯ ತಿಳಿದಿದೆ.  ಆದರೆ ಅದನ್ನು ಅನುಸರಿಸುವ ಜನ ವಿರಳ. ಮರದ ಬೇರುಗಳ ಬಗ್ಗೆ ಒಂದಷ್ಟು ಮಾಹಿತಿಗಳ ಅರಿವು ಇದ್ದರೆ ಪರಿಸರ ಸಂರಕ್ಷಣೆ ಸುಲಭ.

ಕೆಲವು ಮರಗಳ ಕುರಿತಾಗಿ ಅಧ್ಯಯನ ಮಾಡಿದಾಗ ತಿಳಿದು ಬಂದ ವಿಷಯಗಳು ಎನೆಂದರೆ ಮರದ ಬೇರುಗಳು ಬಲವಾಗಿಲ್ಲ ಎಂಬುದು. ಎಲೆಗೊಂದರಂತೆ ಬೇರುಗಳಿರಬೇಕು. ಮರ ಎಷ್ಟು ಎತ್ತರವಿದೆಯೋ ಅದರಷ್ಟು ಆಳದವರೆಗೆ ಬೇರು ಹರಡಿರ ಬೇಕು. ಆದರೆ ಮಾನವನ ಆಧುನಿಕತೆಯ ಪರಿಣಾಮವಾಗಿ ರಸ್ತೆ, ಕಟ್ಟಡಗಳ ನಿರ್ಮಾಣಕ್ಕಾಗಿ ಮತ್ತು ಚರಂಡಿ ನಿರ್ಮಾಣಕ್ಕಾಗಿ ಮರವನ್ನು ಕತ್ತರಿಸುವುದರೊಟ್ಟಿಗೆ ಸಮೀಪವಿರುವ ಮರದ ಬೇರುಗಳನ್ನು ಕತ್ತರಿಸಲಾಗುತ್ತಿದೆ. ಇದರಿಂದ ಸಣ್ಣ ಗಾಳಿ, ಮಳೆ ಬಂದರೂ ಸಹ ಮರಗಳು ಧರೆಗೆ ಉರುಳುವ ಘಟನೆ ಹೆಚ್ಚಾಗಿದೆ.

ಅಕೇಶಿಯ ಮತ್ತು ನೀಲಗಿರಿ ಮರಗಳು ಇರುವ ಕಡೆಯಲ್ಲಿ ಬೇರೆ ಮರಗಳು ಬೆಳೆಯುವುದಿಲ್ಲ. ಮತ್ತು ಮಣ್ಣಿನ ಗುಣಮಟ್ಟದ ಕೊರತೆ ಉಂಟಾಗುತ್ತದೆ. ಈ ವಿಷಯ ಅಧ್ಯಯನದ ಮೂಲಕ ಸಾಬೀತಾಗಿದೆ. ಕೆಲವೆಡೆ ಇಂತಹ ಮರಗಳನ್ನು ಬೇರು ಸಮೇತವಾಗಿ ಕಿತ್ತು ಹಾಕಲಾಗಿದೆ. ಮರಗಳಿಗೂ ಮಾನನವನಿಗೆ ಬಂದಂತೆ ಹಲವಾರು ಕಾಯಿಲೆಗಳು ಬಾದೆಗಳು ಎದುರಾಗುತ್ತವೆ. ಭೂಮಿಯ ಸುರಕ್ಷೆಗಾಗಿ ಮತ್ತು ಮರದ ಉಳಿವಿಗಾಗಿ ಸಂರಕ್ಷಿತ ಅರಣ್ಯ ಪ್ರದೇಶಗಳನ್ನು ಇಟ್ಟು ಕಾಪಾಡಿಕೊಳ್ಳುವ ಸ್ಥಿತಿ ಎದುರಾಗಿರುವುದು ಖೇದಕರ ಸಂಗತಿ.

ಮತ್ತೊಂದು ಗಮನಾರ್ಹ ಸಂಗತಿ ಎಂದರೆ ಬೇರುಗಳು ಯಾವತ್ತೂ ಜೀವಂತವಿರುವುದಿಲ್ಲ ಅವು ಆಗಾಗ ಸತ್ತು ಮಣ್ಣಿನಾಳದಲ್ಲಿ ಹುಟ್ಟುತ್ತಿರುತ್ತವೆ. ಇದರಿಂದ ಮಣ್ಣಿನ ಫಲವತ್ತತೆ ಇನ್ನು ಹೆಚ್ಚುತ್ತದೆ.  ತಾಯಿ ಬೇರು ಮತ್ತು ತಂತು ಬೇರುಗಳ ಕುರಿತು ಸಾಮಾನ್ಯ ಜ್ಞಾನ ನೀಡುವ ಕೆಲಸವನ್ನು  ಪ್ರಾಥಮಿಕ ಶಾಲೆಯಿಂದಲೇ ಮಾಡಲಾಗಿದೆ. ಕಲಿಕೆಯ ಭಾಗವಾಗಿ ಪರಿಸರ ಅಧ್ಯಯನ ಎಂಬ ವಿಷಯಾಧಾರಿತ ಪಠ್ಯವನ್ನು ನೀಡಿದ್ದಾರೆ.
 
ಮರಗಳು ಎಲೆಯಿಂದ ತಮ್ಮ ಆಹಾರವನ್ನು ದ್ಯುತಿಸಂಶ್ಲೇಷಣೆ ಮೂಲಕ ತಯಾರಿಸಿಕೊಳ್ಳುತ್ತವೆ. ಮತ್ತು ತಮಗೆ ಬೇಕಾದ ಪೋಷಕಾಂಶಗಳನ್ನು ಬೇರಿನಿಂದ ಪಡೆದು ಕೊಳ್ಳುತ್ತವೆ. ಎಲ್ಲಾ ಮರಗಳು ಒಂದೇ ತರದ ಅಂಶಗಳನ್ನು ಎಳೆದುಕೊಳ್ಳುವುದಿಲ್ಲ. ಆದರೆ 'ಟ್ರಾನ್ಸ್ ಮ್ಯುಟೇಶನ್' ಎಂದು ಕರೆಯಲ್ಪಡುವ ಒಂದು ಕ್ರಿಯೆಯ ಮೂಲಕ ತನಗೆ ಬೇಕಾದ ಪೋಷಕಾಂಶಗಳನ್ನು ಸೃಷ್ಟಿಸಿಕೊಳ್ಳುವ ತಾಕತ್ತು ಮರಗಳಗಿರುತ್ತದೆ.

ಪರಿಸರ ಸಂರಕ್ಷಣೆ ಮಾಡಲು ಇಚ್ಚಿಸುವವರು ಮತ್ತು ಗಿಡಗಳನ್ನು ಬೆಳೆಸುವವರು ಒಂದು ಗಿಡದಿಂದ ಇನ್ನೊಂದು ಗಿಡದ ನಡುವೆ ಇಡಬೇಕಾದ ಅಂತರಗಳ ಕುರಿತು ಗಮನಹರಿಸಬೇಕು. ಏಕೆಂದರೆ ಒತ್ತೊತ್ತಾಗಿ ಗಿಡ ನೆಟ್ಟರೆ ಮರವಾಗುವ ಸಂಧರ್ಭದಲ್ಲಿ ಬೇರುಗಳು ಹರಡಿಕೊಳ್ಳು ಸ್ಥಳದ ಅಭಾವ ಉಂಟಾಗುತ್ತದೆ. ಇದರಿಂದ ಮರದ ದೃಢತೆ ಕ್ಷೀಣಿಸುತ್ತದೆ. ಬೇರುಗಳ ಕುರಿತು ಇಷ್ಟಾದರೂ ಅರಿವಿದ್ದರೆ ಪರಿಸರದ ಉಳಿವು ಸಾಧ್ಯ.

ಸುಮಾ.ಕಂಚೀಪಾಲ್



Comments

Post a Comment

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...