Skip to main content

ಪ್ರವಾಸೋದ್ಯಮ ಏಕೆ ಹೀಗೆ?

ಪ್ರವಾಸೋದ್ಯಮ ಏಕೆ ಹೀಗೆ ?

ಕರ್ನಾಟಕ ಒಂದು ಸುಂದರ ತಾಣ. ಇಲ್ಲಿ ಹಲವಾರು ಪ್ರವಾಸಿ ಕೇಂದ್ರಗಳಿವೆ. ಪ್ರಸಿದ್ದ ಬನಗಳವೆ , ಕೋಟೆಗಳಿವೆ ದೇವಾಲಯಗಳಿವೆ ಸುಂದರ ಸೊಬಗಿನ ನಾಡು ನಮ್ಮ ಕರುನಾಡು. ಇಲ್ಲಿ ನಾನು ಹೇಳಲು ಹೊರಟಿರುವುದು ಇದೆ ಸುಂದರ ತಾಣಗಳ ಕುರಿತಾಗಿ ಪ್ರತಿಯೊಬ್ಬರೂ ಪ್ರವಾಸ ಪ್ರಿಯರೇ, ಇಂದಿನ ಯುವ ಜನತೆಯಂತೂ ಹಿಂದಿಗಿಂತ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಂದಾಗಿ ಪ್ರವಾಸದ ಕುರಿತು ಹೆಚ್ಚಿಗಿನ ಆಸಕ್ತಿ ತೋರುತ್ತಿದ್ದಾರೆ.

ಮನರಂಜನೆಗಾಗಿ ಮೋಜು ಮಸ್ತಿಗಳಿಗಾಗಿ ಸಂತೋಷಕ್ಕಾಗಿ ಪ್ರವಾಸಕ್ಕೆ ಹೋಗುವುದು ಒಂದು ರೂಢಿಯಾಗಿದೆ . ಆದ್ಧರಿಂದ ಒಬ್ಬರಿಂದ ಮತ್ತೊಬ್ಬರಿಗೆ ಜಾಗಗಳ ಪರಿಚಯ ಬಹುಬೇಗ ಆಗಿಬಿಡುತ್ತೆ. ತಮ್ಮದೇ ಆದ ಕೆಲವು ಗುಂಪುಗಳನ್ನು ಹೊಂದಿ ಸದಾ ಸುತ್ತಾಟದಲ್ಲಿ ಮುಳುಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ ಮಾಡುವುದು ಸರ್ವೇ ಸಾಮಾನ್ಯವಾಗಿದೆ‌. ಹೀಗಿರುವಾಗ ಅದಕ್ಕೆ ಪೂರಕವಾಗಿ ಸಾರ್ವಜನಿಕ ಸಂಸ್ಥೆಗಳು ಹುಟ್ಟಿಕೊಂಡು ಉದ್ಯಮವಾಗಿ ಬಿಟ್ಟಿದೆ. ಇದು ಪರಿಸರಕ್ಕೆ ಕುತ್ತು ತರುತ್ತಿದೆ.

24 September 2019 ಕಡಲವಾಣಿ.

ಇಂತ ಪ್ರವಾಸೋದ್ಯಮವು ಬದಲಾಗಬೇಕಾಗಿದೆ.

ಪ್ರವಾಸಿ ಮಂದಿರಗಳ ಸದ್ಬಳಕೆ ಮತ್ತು ಬರುವ ಜನರಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಿದರೆ ನಮ್ಮ ಸರ್ಕಾರವು ಪ್ರಯೋಜನ ಪಡೆದುಕೊಂಡು ಆ ದುಡ್ಡಿನಿಂದ ಜನತೆಗೆ ಸಹಾಯ ಮಾಡಬಹುದು.

ಸಿಂಗಾಪುರದಂತ ಪಟ್ಟಣಗಳು ಇಂದು ಪ್ರವಾಸೋದ್ಯಮ ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುಧಾರಣೆಯನ್ನು ಕಂಡುಕೊಂಡಿದೆ. ಹಾಗೆಯೇ ಅಮೇರಿಕದಲ್ಲಿ ನಯಾಗರ ಜಲಪಾತದ ಸಮೀಪ ವಿಮಾನ ನಿಲ್ದಾಣ ನಿರ್ಮಿಸುವುದರ ಮೂಲಕ ಜಾಗದ ಉಳಿತಾಯ ಮಾಡಿ ಒಂದು ಹೊಸ ರೂಪದ ವಿಮಾನ ನಿಲ್ದಾಣ ಮಾದರಿಯಾಗಿದೆ.

ಹಾಗೆ ನಮ್ಮ ಕರ್ನಾಟಕದಲ್ಲೂ ನಾವು ಪ್ರಯೋಜನ ಪಡೆದುಕೊಳ್ಳಬಹುದಿತ್ತು. ಎಷ್ಟೋ ಪ್ರವಾಸಿ ತಾಣಗಳಲ್ಲಿ ಸರಕಾರಿ ಅತಿಥಿ ಗೃಹ ನಿರ್ಮಾಣ ಮಾಡಿ ಕಡಿಮೆ ದರದಲ್ಲಿ ಪ್ರವಾಸಿಗಳಿಗೆ ನೀಡಿದಲ್ಲಿ ಅದರ ಪ್ರಯೋಜನವನ್ನು ಪಡೆದುಕೊಳ್ಳಬಹುದಿತ್ತು. ಅದರಿಂದ ಪ್ರವಾಸಿಗರಿಗೂ ಸಹಾಯವಾಗುತ್ತಿತ್ತು‌. ಈ ನಿಟ್ಟಿನಲ್ಲಿ ಒಳ್ಳೆಯ ಯೋಜನೆಗಳು ಜಾರಿಗೆ ಬರಬೇಕು ಬದಲಾವಣೆಗಳು

ಬೆಳವಣಿಗೆಯದ್ದಾಗಿರಬೇಕು : ಜಲಪಾತ ದೇವಾಲಯಗಳನ್ನು ನೋಡಿ ಆನಂದಿಸುವುದರೊಟ್ಟಿಗೆ  ಮುಂದಿನ ಪೀಳಿಗೆಗೆ ಅದನ್ನು ತಲುಪಿಸುವ ಉದ್ದೇಶವಿರಬೇಕು. ಅಲ್ಲಿನ ಸಮಸ್ಯೆಯ ಕುರಿತ ಅಧ್ಯಯನ ಮಾಡಿ ಪ್ರಗತಿಯ ಹಾದಿಯಲ್ಲಿ ಪ್ರವಾಸಗರು ಗಮನಹರಿಸಬೇಕು ಇಂತಹ ವಿಷಯಗಳ ಕುರಿತ ಆಸಕ್ತಿ ಹೊಂದಿದವರು ಕಡಿಮೆ ಇದ್ದಿರಬಹುದು ಆದರೆ ಇಂತವರು ಇಲ್ಲವೇ ಇಲ್ಲ ಎಂಬಂತಿಲ್ಲ.

ಪರಿಸರದ ಪವಿತ್ರ ತೆ ಕಾಪಾಡಬೇಕು. ಕಸ ಚೆಲ್ಲುವುದು ಸ್ಮಾರಕಗಳನ್ನು ಹಾಳು ಮಾಡುವುದು ಕಾಡಿನಲ್ಲಿ ಗುಡ್ಡಗಳಲ್ಲಿ ಓಡಾಡುವುದು ಪ್ರಾಣಿಗಳ ಶಾಂತಿಗೆ ಧಕ್ಕೆ ತರುವ ಕೆಲಸಗಳನ್ನು ಮಾಡಬಾರದು. ಪ್ರವಾಸೋದ್ಯಮ ಪ್ರಗತಿಪರವಾಗಲಿ ಪ್ರವಾಸಿಗರಲ್ಲು ಇದು ನಮ್ಮದು ಎಂಬ ಮನೋಭಾವ ಇರಲಿ.

ಸುಮಾ.ಕಂಚೀಪಾಲ್

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...