Skip to main content

ಒಂದು ಪಯಣ

ಐದು ತಿಂಗಳಿಂದ ಮನೆಯಲ್ಲೇ ಉಳಿದು ಒಂದೊಮ್ಮೆಲೆ ದೂರದ ಊರಿಗೆ ಹೊರಡಲು ಸ್ವಲ್ಪ ಬೇಸರ ಎನಿಸಿದರೂ ಅದು ಅನಿವಾರ್ಯವಾಗಿತ್ತು. ಬೆಳಿಗ್ಗೆ ಆರು ಗಂಟೆಗೆ ಎದ್ದು ಹೊರಟರೆ ಸಂಜೆ ಆರುಗಂಟೆ ಸಮೀಪಿಸುತ್ತಿದ್ದಂತೆ ಊರು ತಲುಪಿದವಳು ನಾನು‌. ದಾರಿಯಲ್ಲಿ ಹತ್ತಾರು ಅನುಭವ ಎಷ್ಟೆಲ್ಲ ನೆನಪು, ಒಂಟಿ ಪ್ರಯಾಣ ಬೇರೆ.

ಸರಕಾರಿ ಬಸ್ ಹತ್ತಿ ಕೂತವಳಿಗೆ ಧರ್ಮಸ್ಥಳ ಎಂದು ಟಿಕೆಟ್ ಮಾಡಿಸಿ  ಬಸ್ ಕಿಟಕಿಯಿಂದ ಅಪ್ಪನ ಮುಖವನ್ನೊಮ್ಮೆ ಕಿಟಕಿಯಿಂದ ಇಣುಕಿ ನೋಡಿ, ದಾವಂತದಲ್ಲೂ ತುಸು ನಗುವಷ್ಟರಲ್ಲಿ ಬಸ್ ಹೊರಟಿತು. ಪ್ರತಿಯೊಂದು ಬಸ್ ತಂಗುದಾಣದಲ್ಲೂ ಏಳೇಂಟು ನಿಮಿಷ ನಿಲ್ಲುತ್ತಾ ಉಡುಪಿಯಲ್ಲಿ ಕಾಲು ಗಂಟೆ ಊಟಕ್ಕೆಂದು ನಿಲ್ಲಿಸಿದರು.

ದಾರಿ ಸಮಯ ಎರಡೂ ಸಾಗುತ್ತದೆ.

ನನ್ನ ಜೊತೆಗೆ ಪ್ರಯಾಣಿಸುವವರು ಯಾರೂ ಇಲ್ಲದ ಕಾರಣ ನನ್ನ ಎರಡು  ಬ್ಯಾಗ್ ಬಿಟ್ಟು ಇಳಿದು ಹೋಗಲು ಮನಸಾಗದೆ‌. ದೈಹಿಕ ಬಾದೆಗಳನ್ನೆಲ್ಲ ತಡೆ ಹಿಡಿದು ಕೂತೆ ಇದ್ದೆ‌. ಆಗಾಗ ನಿದ್ದೆ ಕಣ್ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ನನ್ನ ಕೈಗಡಿಯಾರದಲ್ಲಿ ಒಂದೊಂದು ತಾಸು ಮುಳ್ಳು ಮುಂದೆ ತಿರುಗಿರುತ್ತಿತ್ತು. ಹಾದಿ ಕರ್ಚಿಗೆ ಪುಸ್ತಕ ಇಟ್ಟುಕೊಳ್ಳುವ ರೂಢಿ ಇದೆ ನನಗೆ. ಆದರೆ ಈ ಬಾರಿ ಅದನ್ನು ಮರೆತೆ.

ಪೋನ್ ನೋಡಿಕೊಂಡು ಕಾಲ ಕಳೆಯಲು ಭಯ. ಚಾರ್ಜ್ ಕಾಲಿಯಾದರೆ ಬಸ್ ಇಳಿದನಂತರ ನನ್ನನ್ನು ಕರೆದುಕೊಂಡು ಹೋಗಲು ಬನ್ನಿ ಎಂದು ಸ್ನೇಹಿತರಿಗೆ ಸುದ್ದಿ ಮುಟ್ಟಿಸುವುದಕ್ಕೂ ಸಾಧ್ಯವಾಗದ ಸ್ಥಿತಿ ಎದುರಾದರೆ ಎಂದು ಹಾಗೇ ಖಾಲಿ ಕೂತಿದ್ದೆ. ನನ್ನೊಳಗಿನ ಅಂತರ್ಮುಖಿ ಸಂವಹನಕ್ಕೆ ಅಷ್ಟು ದೀರ್ಘ ಸಮಯ ಸಿಕ್ಕಿದ್ದು ಬಹಳ ಅಪರೂಪ.

ಬಂದು ಸೇರುವ ಜಾಗ.

ಕೆಲವೊಮ್ಮೆ ಅಂತು ಅನಿಸುತ್ತಿತ್ತು. ಇದೇನಿದು ಊರೆ ಬರುತ್ತಿಲ್ಲ ಅಮೇರಿಕವಾದರೂ ಉಜಿರೆಗಿಂತ ಸಮೀಪವಿದ್ದಿರ ಬಹುದು ಎಂದು ತಮಾಷೆ ಅನಿಸುತ್ತಿತ್ತು. ಈ ಒಂಟಿ ಪಯಣಗಳು ಒಂದು ತರದ ಖುಷಿ ಕೊಡುವುದಂತೂ ಹೌದು. ಅಕ್ಕ ಪಕ್ಕದಲ್ಲಿ ಅದೆಷ್ಟೋ ಜನ ಬಂದು ಕೂತು ಎದ್ದು ಹೋಗುತ್ತಿದ್ದರು. ಹಾಗೆ ನಮ್ಮ ಬಸ್ಸು ಅದೆಷ್ಟೋ ಊರಿನ ದಾರಿಗಳನ್ನು ತುಳಿದು ಸಾಗುತ್ತಿತ್ತು. ನಾವೂ ಹಾಗೆ ಬದುಕಿನ ಎಷ್ಟೋ ಅಧ್ಯಾಯಗಳನ್ನು ದಾಟಿ ಸಾಗುತ್ತಿದ್ದೇವೆ.

ಸುಮಾ.ಕಂಚೀಪಾಲ್

Comments

Post a Comment

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ. ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ. ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ? ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು. ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತ...

ನಾಲ್ಕು ವರುಷದ ಖುಷಿ

ಜುಲೈ 6, 2021. ಕಂಚೀಪಾಲ್ ಬ್ಲಾಗ್ ಸ್ಪಾಟ್‌ನಲ್ಲಿ ಅಂದು ನಾನು ನನ್ನ ಮೊದಲ ಬರಹ ಪ್ರಕಟಿಸಿದ್ದೆ. ಓದುಗರು ಇಷ್ಟವಾದರೆ ಓದುತ್ತಾರೆ, ಇಲ್ಲವೆ ಪ್ರಯತ್ನ ಜಾರಿಯಲ್ಲಿರಲಿ. ನಾನಂತೂ ಬರಿಲೇಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿಮ್ಮಿಂದ ನನಗೆ ಸಿಕ್ಕ ಸ್ಪಂದನೆ ಬಹಳ ದೊಡ್ಡದು. ಒಮ್ಮೆ ಓದಿದವರು ಮತ್ತೊಮ್ಮೆ ಓದಿ ಇಷ್ಟವಾದ ಬರಹಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ನಾನು ಸಿಕ್ಕಾಗೆಲ್ಲ 'ನೀ ಬರೆದದನ್ನು ಓದಿದೆ, ತುಂಬಾ ಚೆನ್ನಾಗಿತ್ತು. ಹೀಗೆ ಬರಿತಾ ಇರು' ಎಂದು ಪ್ರೋತ್ಸಾಹಿಸಿದವರು ಹಲವರಿದ್ದೀರಿ. ಮನೆ, ಕಾಲೇಜು, ಆಫೀಸ್ ಎಲ್ಲ ಕಡೆಗಳಲ್ಲಿ ಖುಷಿಯಿಂದ ಬರೆದೆ. ಇಂದು ಇದೇ ಅಕ್ಷರಗಳು ನನ್ನ ಬದುಕಿನ ಕೈಹಿಡಿದು ಮುನ್ನಡೆಸುತ್ತಿವೆ. ಮೊದಲ ಉದ್ಯೋಗ ಸಿಕ್ಕಾಗ ಮತ್ತು ನನ್ನ ಮುಂದಿನ ಹೆಜ್ಜೆಗೂ ಇದೇ ಬ್ಲಾಗ್ ಕಾರಣ ಎಂದು ಕೆಲಸ ಕೊಟ್ಟವರೂ ಹೇಳಿದ್ದು ಇನ್ನೊಂದು ಖುಷಿ. ಇಂದಿಗೆ ಈ ಬ್ಲಾಗ್ ಆರಂಭವಾಗಿ 4 ವರ್ಷಗಳು ಸಂದಿವೆ. ಹಲವರು ಸಾಮಾಜಿಕ ಕಾರ್ಯಕ್ರಮ, ಸ್ವ ಉದ್ಯೋಗಗಳಿಗೆ ಸಂಬಂಧಿಸಿದ ಬರಹಗಳನ್ನು ಇದೇ ಬ್ಲಾಗ್ ಮೂಲಕ ಸಂಪರ್ಕಿಸಿ ಬರೆಸಿಕೊಂಡಿದ್ದಾರೆ. ಕೆಲವರಿಗೆ ಉಚಿತವಾಗಿ ಬರೆದುಕೊಟ್ಟರೆ, ಇನ್ನು ಕೆಲವರು ಅವರಾಗೇ ಹಣ ತಲುಪಿಸಿದ್ದೂ ಉಂಟು.  ಈ 4 ವರ್ಷಗಳಲ್ಲಿ ಹತ್ತೊಂಬತ್ತು ಸಾವಿರ ಜನರು ನನ್ನ ಬ್ಲಾಗ್ ಓದಿದ್ದಾರೆ. ಅದರಲ್ಲಿ ನೀವೂ ಒಬ್ಬರು. 21 ಸಾವಿರ ಜನರನ್ನು ಈ ನಾಲ್ಕು ವರ್ಷಗಳಲ್ಲಿ ತಲುಪಬೇಕು ಎಂಬ ಸಂಕಲ್ಪ ಆಗ...