Skip to main content

ಪರಮಾತ್ಮ

1975ರಲ್ಲಿ ಕನ್ನಡ ನಾಡಿನ ಖ್ಯಾತ ನಟ ರಾಜಕುಮಾರ ಮತ್ತು ಪಾರ್ವತಮ್ಮ ಅವರ ಮಡಿಲಲ್ಲಿ ಅವರ ಮೂರನೆ  ಕೂಸೊಂದು ಅಳುತ್ತಿತ್ತು. ಅವರೇ ಪುನೀತ್ ರಾಜಕುಮಾರ. ಅವರ ಮೊದಲ ಹೆಸರು ಲೋಹಿತ್ ಇವರು ತಮ್ಮ ಬಾಲ್ಯದಿಂದಲೇ ಸಿನಿಮಾಗಳಲ್ಲಿ ನಟನೆ ಆರಂಭಿಸಿ ಎಲ್ಲರ ಅಚ್ಚು ಮೆಚ್ಚಿನ ಅಪ್ಪುವಾಗಿ ಅಭಿಮಾನಿಗಳ ಮನಸಲ್ಲಿ ಬೆರೆತವರು.

ಬಲವಾಗಿ ನಾಡಿನ ಜನತೆಯಲ್ಲ ನೊಂದಿದೆ. ಕನ್ನಡ ರಾಜೋತ್ಸವದ ಉತ್ಸಾಹಕೂಡ ಈಗ ಯಾರಲ್ಲೂ ಇಲ್ಲ.  ಸಂಜೆಯಾಗಿದೆ. ಯಾರೂ ಊಹಿಸದ ಕರಾಳ ಘಟನೆಗಳು ಆಗಾಗ ನಡೆಯುತ್ತಿರುವುದು ಈಗ ಜನರಿಗೂ ರೂಢಿಯಾಗಿದೆ. ಅದೆಷ್ಟೋ ಜನರ ಮನೆಯಲ್ಲಿ ಮಧ್ಯಾಹ್ನ ಹನ್ನೊಂದುಗಂಟೆಯಿಂದ ಟಿ.ವಿಯಲ್ಲಿ ನಿವ್ಸ್ ಚಾನೆಲ್ಗಳೇ ಹಚ್ಚಿಕೊಂಡಿವೆ. ಉಣ್ಣಲು ಹಸಿವಿಲ್ಲದ ಕೆಲಸ ಮಾಡಲೂ ಮನಸ್ಸಾಗದ ಎಷ್ಟೋ ಕೆಲಸ ನಿಲ್ಲಿಸಿ ಒದ್ದೆ ಕಣ್ಣಿನಲ್ಲಿ ಕೂತಿದ್ದಾರೆ. ಅಭಿಮಾನಿಯೊಬ್ಬ ಹೃದಯಾಘಾತದಿಂದ ಸಾವನ್ನೊಪ್ಪಿದ ಸುದ್ದಿಯೂ ಕಿವಿಗೆ ಬೀಳುತ್ತಿದೆ. ಅವರೇ ನೋಡಿಕೊಳ್ಳುತ್ತಿದ್ದ ವೃದ್ದಾಶೃಮದ ಅದೆಷ್ಟೋ ಅಪ್ಪ ಅಮ್ಮಂದಿರು ಮತ್ತೆ ಅನಾಥರಾದ ಭಾವನೆ ಮೂಡುತ್ತಿದೆ.‌


ಬೆಟ್ಟದ ಹೂವು ಇವರು ನಟಿಸಿರುವ ನಾಲ್ಕನೆ ಚಿತ್ರ. ಆದರೆ ಬೆಟ್ಟದ ಹೂವು ಎಂದಾಕ್ಷಣ ನೆನಪಾಗುವ ಅವರ ಮುಗ್ಧತೆ ಮತ್ತು ನಗು ಆ ವಯಸ್ಸಿಗೆ ಅವರಿಗಿದ್ದ ನಟನಾ ಶಕ್ತಿ ಅಪಾರವಾದದ್ದು. ಪ್ರೇಮದ ಕಾಣಿಕೆ, ಭಾಗ್ಯವಂತರು, ಎರಡು ನಕ್ಷತ್ರಗಳು, ಚಲಿಸುವ ಮೋಡಗಳು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ, ಯಾರಿವನು, ಭಕ್ತ ಪ್ರಹ್ಲಾದ, ವಸಂತಗೀತ ಇಷ್ಟೂ ಚಿತ್ರದಲ್ಲಿ ಇವರು ಬಾಲ ನಟನಾಗಿ ನಟಿಸಿದ್ದಾರೆ.

1999 ಅಲ್ಲಿ ಇವರು ಅಶ್ವಿನಿ ರೇವಂತ್ ಅವರನ್ನು ತಮ್ಮ ಜೀವನ ಸಂಗಾತಿಯಾಗಿಸಿಕೊಂಡು ಸುಖಿ ದಾಂಪತ್ಯದೊಟ್ಟಿಗೆ ಅವರ ಪತ್ನಿಯೂ ಚಿತ್ರಗಳಿಗೆ ಇನ್ನೂ ಹೆಚ್ಚಿನ ಬೆಂಬಲವಾಗಿ ನಿಂತರು. ಇಪ್ಪತ್ತಾರಕ್ಕೂ ಹೆಚ್ಚು ನಾಯಕ ನಟನಾಗಿ ಬೇರೆ ಬೇರೆ ಚಿತ್ರಗಳಲ್ಲಿ ನಟಿಸಿ ಖ್ಯಾತರಾಗಿರುವ ಸಂಗತಿ ನಮಗೆಲ್ಲ ತಿಳಿದೇ ಇದೆ. ಪರಮಾತ್ಮ ಮತ್ತು ಅಣ್ಣಾಬಾಂಡ, ಪವರ್ ಸ್ಟಾರ್, ದೊಡ್ಮನೆಹುಡುಗ, ಯುವರತ್ನ, ವಂಶಿ,ಅಂಜನಿ ಪುತ್ರ, ನಟ ಸಾರ್ವಭೌಮ, ಈ ಚಿತ್ರಗಳ ಬಗ್ಗೆ ಕನ್ನಡಿಗರೆಲ್ಲರಿಗೂ ಸಂಭಾಷಣೆ ಮತ್ತು ಹಾಡುಗಳು ಕಂಠಪಾಠವಾಗುವಷ್ಟುಬಾರಿ ನೋಡಿರುತ್ತಾರೆ.


ಕಿರುತೆರೆಯಲ್ಲಿ ಕನ್ನಡದ ಕೋಟ್ಯಾಧಿಪತಿ ಮತ್ತು ಪ್ಯಾಮಿಲಿಪರ್, ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಇವರು. PRK ಪ್ರೊಡಕ್ಷನ್ ಹೌಸ್ ನಡೆಸುತ್ತಾ ಹೊಸ ಕಲಾವಿದರಿಗೆ ಚಿತ್ರೀಕರಣದಲ್ಲಿ ಆಸಕ್ತಿ ಇರುವವರಿಗೆ ಸ್ಪೂರ್ತಿ ಚೇತನರಾಗಿದ್ದವರು ಇವರು. ಸರಳ ಜೀವನ ನಡೆಸುತ್ತಿದ್ದ ಇವರು ಹಲವಾರು ಪುಣ್ಯದ ಕಾರ್ಯದಲ್ಲಿ ಭಾಗಿಯಾಗಿದ್ದರು.
26 ಅನಾಥಶ್ರಮ, 46 ಉಚಿತ ಶಾಲೆ, 16 ವೃದ್ದಾಶ್ರಮ, 19 ಗೋಶಾಲೆ,  1800 ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ, ಮೈಸೂರಿನಲ್ಲಿ ಶಕ್ತಿಧಾಮ ಎನ್ನುವ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ವ್ಯವಸ್ಥೆ ಕಲ್ಪಿಸಿದ ಕರುಣಾಮಯಿ. ಇಂದಿರುವವರು ನಾಳೆ ಇರುವುದಿಲ್ಲ ಎನ್ನುವ ಮಾತು ಎಷ್ಟು ನಿಜ ಎಂಬುದು ಪದೆ ಪದೆ ಅರಿವಿಗೆ ಬರುತ್ತಿದೆ.

ಎಷ್ಟೋ ಅಭಿಮಾನಿಗಳು ಅವರನ್ನು ಹತ್ತಿರದಿಂದ ಭೇಟಿಯಾಗಿದ್ದಾರೆ‌. ಇನ್ನು ಕೆಲವರು ಅವರನ್ನು ಭೇಟಿ ಮಾಡಲು ಕಾಲ ಕೂಡದೆ ಕಾಯುತ್ತಿರುವವರಿದ್ದರು. ಆದರೆ ಅವರ ಜೀವನದ ಕೊನೆ ಉಸಿರಿನ ಏರಿಳಿತ ಇಷ್ಟು ಬೇಗ ಸ್ಥಗಿತಗೊಳ್ಳುವ ಅರಿವು ಯಾರಿಗೂ ಇರಲಿಲ್ಲ. 

ಸುಮಾ.ಕಂಚೀಪಾಲ್


Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...