Skip to main content

ಅನಾಮಿಕ‌ ಜಲಪಾತದ ಹಾದಿ

udyavani digitalಯಾವುದೋ ಅನಾಮಿಕ ಜಲಪಾತ ಒಂದರ ಬುಡದಲ್ಲಿ ನಿಂತು ನಾನಿದನ್ನು ನಿಮಗೆ ವಿವರಿಸುತ್ತಿದ್ದೇನೆ ಎಂದು ಊಹಿಸಿಕೊಳ್ಳಿ. ನೀವೂ ನನ್ನೊಟ್ಟಿಗೆ ಈ ಪಯಣದಲ್ಲಿ ಸಾತ್ ನೀಡಿದ್ದೀರಿ ಎಂದು ನಾನು ಊಹಿಸಿಕೊಳ್ಳುತ್ತೇನೆ.‌ ಆಗ ಈ ಬರಹ ನಿಮಗೆ ನಾನು ನಡೆದುಹೋದ ದಾರಿಯ ಪ್ರತಿಯೊಂದು ಚಿತ್ರಣವನ್ನು ಬಿಂಬಿಸುತ್ತಾ ಹೋಗುತ್ತದೆ.

ತೀರಾ ಕಡಿದಾದ ಮಣ್ಣು ರಸ್ತೆಯಲ್ಲಿ ನಾವು ಒಂದಷ್ಟು ಜನ ಸಾಹಸ ಮಾಡಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದೇವೆ. ದಾರಿಯ ಉದ್ದಕ್ಕೂ ಆಗಾಗ ಮಳೆ ಮತ್ತು ರಸ್ತೆಯ ಅಕ್ಕಪಕ್ಕದಲ್ಲಿ ರಬ್ಬರ್ ಮರಗಳೇ ಹಾಸಿಕೊಂಡಿವೆ. ಇಷ್ಟರ ನಡುವೆ ಕೆಲವರಿಗೆ ರೇನ್ ಕೋಟ್ ಇದೆ ಇನ್ನು ಕೆಲವರಿಗಿಲ್ಲ.  ರಸ್ತೆ ಕಳೆದು ಇನ್ನೇನು ಜಲಪಾತ ಬರುತ್ತದೆ ಎನ್ನುವಷ್ಟರಲ್ಲಿ ಆ ಜಲಪಾತಕ್ಕೆ ಹೋಗುವ ಮಾರ್ಗವನ್ನೇ ಬಂದ್ ಮಾಡಲಾಗಿದೆ ಎಂಬ ಸುದ್ದಿ ಸಿಕ್ಕಿತು. ಪ್ರವಾಸಿಗರಿಗೆ ಅಲ್ಲಿ ನಿಷೇಧವಿದೆ ಎಂದು ತಿಳಿದಾಗ ಕೊಂಚ ಬೇಸರವೆನಿಸಿದರೂ ಜೊತೆಯಲ್ಲಿ ಇದ್ದ ಘಟಾನುಘಟಿಗಳು ಯಾರದೋ ಪರವಾನಿಗೆ ಪಡೆದು ಅಂತು ಮುಂದೆ ಸಾಗಿದೆವು.

ತಲುಪುವ ಸ್ಥಳಕ್ಕಿಂತ ಹೊರಟಿದ್ದ ಹಾದಿಯ ಫಜೀತಿಯೇ ಬೇರೆ ಅನುಭವ ನೀಡುತ್ತಿದೆ. ಅಷ್ಟು ಕಲ್ಲು ಗುಡ್ಡೆಯಂತ ದಾರಿ, ಮೂಗಿನ ನೇರಕ್ಕೆ ಘಟ್ಟಗಳು, ಅಲ್ಲಲ್ಲಿ ಒಬ್ಬರೇ ದಾಟುವಷ್ಟು ಚಿಕ್ಕ ಸೇತುವೆ, ನೀರಿನ ಚಿಕ್ಕ ಚಿಕ್ಕ ಝರಿಗಳು, ಇಷ್ಟರ ನಡುವೆ ಅದ್ಭುತದಲ್ಲಿ ಅದ್ಬುತ ಅನುಭವ ನೀಡಿದ್ದು ಅಚ್ಚರಿಯ ಜೀವಿ ಇಂಬಳ ( ಜಿಗಣೆ, ಲೀಚ್ ) ರಕ್ತ ಬೀಜಾಸುರನ ವಂಶಸ್ಥರಾದ ಇವರು ಹಾದಿಯ ತುಂಬೆಲ್ಲ ಪೂರ್ಣ ಕುಂಭ ಸ್ವಾಗತಕ್ಕೆ ನಿಂತಹಾಗೆ ಕಾದುನಿಂತಿವೆ. ಬಿಸಿ ನೆತ್ತರದ ಹಸಿವಾಸನೆಗೆ ಕಚ್ಚಿದ ಜಾಗದಲ್ಲೇ ಮತ್ತೆ ಮತ್ತೆ ಕಚ್ಚುತ್ತಿವೆ. ದಾರಿಯೇ ಇಲ್ಲದ ಮಾರ್ಗದಲ್ಲಿ ಸೊಂಪಾಗಿ ಬೆಳೆದಿದ್ದ ಹಸಿರು ಸೊಪ್ಪಿನ ಗಿಡಗಳು, ಮೈತುಂಬಾ ಮುಳ್ಳು ತುಂಬಿರುವ ಬಿದಿರಿನ ಎಳೆಗಳು ಮೈಸೀಳುತ್ತಿವೆ. ನಾವು ತೊಟ್ಟ ಬಟ್ಟೆಗಳನ್ನು ಮುಳ್ಳಿನ ಹಾರ ಅಪ್ಪಿಕೊಂಡು ಅಲ್ಲಲ್ಲಿ ತೂತಾಗಿಸಿತ್ತು.


ಇವುಗಳ ಅಪ್ಪುಗೆಯನ್ನು ತಪ್ಪಿಸಿಕೊಂಡು ಮುಂದೆ ಸಾಗಿದ್ದೇವು.‌ ದೂರದಲ್ಲಿ ಒಂದು ಮನೆ ಕಾಣಿಸುತ್ತಿದೆ. ಮನೆ ಎದುರೆಲ್ಲಾ ಹಣ್ಣಡಿಕೆಗಳು ಹಾಸಿಕೊಂಡಿವೆ. ನೀರು ಬೇಕು ಎಂದು ಕೂಗಿದೆವು. ಒಳಗಿನಿಂದ ಒಬ್ಬ ಹೆಂಗಸು ಬಂದಳು. “ಏನು ಬಂದಿದ್ದು”? ಜಲಪಾತಕ್ಕಾ ಎಂದು ಕೇಳಿದಾಗ ಎಲ್ಲರೂ ಒಟ್ಟೊಟ್ಟಿಗೆ ಹೂಂ ಗುಟ್ಟೆವು. “ಹಾಗಾದರೆ ಈ ಕಲ್ಲುಪ್ಪಿನ ಕೋಲು ಹಿಡಿದುಕೊಳ್ಳಿ ದಾರಿಯಲ್ಲಿ ಉಪಯೋಗವಾಗುತ್ತದೆ” ಎಂದರು. ಅದನ್ನು ನಾನು ಮತ್ತು ನನ್ನ ಸ್ನೇಹತರಿಬ್ಬರು ಕೈಯಲ್ಲಿ ಹಿಡಿಕೊಂಡು ಮತ್ತೆ ನಡೆಯಲು ಪ್ರಾರಂಭಿಸಿದ್ದೇವೆ.


ಒಬ್ಬೊಬ್ಬರಿಗೆ ಸರಾಸರಿ ಐವತ್ತು ಇಂಬಳ ಹತ್ತಿ ರಕ್ತ ಹೀರಿದ್ದವು. ಮುಂದೆ ಸಾಗುವ ಹಾಗೂ ಇಲ್ಲ ಹಿಂದೆ ಬರುವ ಹಾಗೂ ಇಲ್ಲ ಅದು ಇಂದು ಅಮಾವಾಸ್ಯೆ ಮನೆಗೆ ತಲುಪುವುದು ಅನುಮಾನ ಎಂದು ಅಂದುಕೊಂಡಿದ್ದೇವು. ಹಿಂದಿರುಗಿ ಬರುವಾಗ  ದಾರಿ ತಪ್ಪುವುದಂತು ಖಚಿತಾಂತ ಗೊತ್ತಾಗಿದೆ. ದಾರಿಯಲ್ಲಿ ಸಿಕ್ಕ ಕೆಂಪು ಅಣಬೆಗಳನ್ನೇ ಗುರುತಾಗಿಸಿಕೊಳ್ಳೋಣ ನೆನಪಿಡಿ.‌ ಅಷ್ಟರಲ್ಲಿ ನೀರು ರಭಸವಾಗಿ ಬೀಳು ಸದ್ದು ಕೇಳುತ್ತಿದೆ. ನಿಮಗು ಕೇಳಿಸಿತಾ! ಹಾಗಾದರೆ ಏಕೆ ತಡ ಎಂದು ಕಾಲಿನ ವೇಗ ಹೆಚ್ಚಿಸಿ ಓಡಿ ಓಡಿ ಹೋಗುತ್ತಿದ್ದೇವೆ. ಆಹಾ ನೀರು ಕಂಡಿತು ಇದೇ ನಮ್ಮ ಜಲಪಾತ ಎಂದು ಖುಷಿಯಲ್ಲಿ ಹುಡುಗಿಯರೆಲ್ಲ ನೀರಿಗಿಳಿದೆವು. ಆದರೆ ರಾಮ, ಮತ್ತು ಹರಿ ಗೆ ಇನ್ನು ಚಂದದ ದೃಶ್ಯದ ಪೂರ್ವ ಕಲ್ಪನೆಯು ನೆನಪಾಗಿದೆ. ಇದಲ್ಲಾ ಬನ್ನಿ ಮುಂದೆ ಜಲಪಾತವಿದೆ ಎಂದಾಗ ಇಷ್ಟು ದೂರ ನಡೆದದ್ದೇ ಸಾಕು ಎಂಬ ಉದಾಸೀನ ನನಗೆ. ಆದರು ಅವರು ಹೇಳುವ ಮಾತು ಕೇಳಿ ಮತ್ತೆ ಎದ್ದು ಹೊರಟಿದ್ದೇವೆ.‌


ಏನೋ ಮಳೆ ಬಂದಂತ ಅನುಭವ ನೀರಿನ ತುಂತುರು ಮೈ ಸೋಕುತ್ತಿದೆ. ತಂಪು ತಂಪು ಗಾಳಿ ಅಲೆ ತಬ್ಬುತ್ತಿದೆ. ಕಣ್ ಅರಳಿಸಿ ಬೆರಗಿನಿಂದ ನೋಡುತ್ತಿದ್ದೇವೆ. ಎಷ್ಟೆತ್ತರ ನೋಡಿದರೂ ಬೀಳುವ ನೀರಿನ ಮೂಲ ಸ್ಥಾನ ಕಾಣುತ್ತಿಲ್ಲ. ಪೂರ್ತಿ ತಲೆ ಎತ್ತಿ ನೋಡಿದರೆ ಮೈಮೇಲೆ ನೀರು ಹಾರಿ ಬರುತ್ತಿದ್ದ ಅನುಭವವಾಗುತ್ತಿದೆ. ಕಲ್ಲು ಗೋಡೆಯ ಮಧ್ಯದಿಂದ ನೀರು ಮೆಟ್ಟಿಲಿಳಿಯುತ್ತಿದೆ. ಇಷ್ಟರ ‌ನಡುವೆ ನಾವೆಲ್ಲಾ ಒಮ್ಮೆ ಮೂಖರಾಗಿ ಪೃಕ್ರತಿ ಸೌಂದರ್ಯ ಸವಿದೆವು. ಮತ್ತದೇ ಕೆಂಪು ಅಣಬೆಗಳ ಜಾಡು ಹಿಡಿದು ನಮ್ಮ ಗೂಡು ಸೇರಿದೆವು…ಬೆಳ್ತಂಗಡಿಯ ಬೊಳ್ಳೆ ಜಲಪಾತದ ಪಯಣದ ಅನುಭವ…ಅಂದ ಹಾಗೆ ನೀವೇನಾದರೂ ಈ ಜಲಪಾತಕ್ಕೆ ಹೋಗುವ ಮನಸ್ಸು ಮಾಡಿದ್ರೆ..ಮೊದಲು ಪರವಾನಿಗೆ ಅಗತ್ಯ ಎಂಬುದನ್ನು ನೆನಪಿಟ್ಟುಕೊಳ್ಳಿ.


ಸುಮಾ.ಕಂಚೀಪಾಲ್

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...