Skip to main content

ನಾರಿ ಶಕ್ತಿ


ಆದರ್ಶವನಿತಾ ಸಮಾಜ ಎಂದರೆ‌ ಉತ್ತರ ಕನ್ನಡದ ಶಿರಸಿಯ ನಾರಿಯರಿಗೆ ಶಕ್ತಿ ತುಂಬುವ ಕೇಂದ್ರ‌. ಸಕ್ರಿಯವಾಗಿ ತಮ್ಮನ್ನು ಸದಾ ಚಲನಶೀಲವಾಗಿರಿಸಿಕೊಳ್ಳಲು ದಾರಿ ತೋರಿದ ಒಂದು ಮಾರ್ಗ. ಹಲವು ವರ್ಷಗಳ ಇತಿಹಾಸವುಳ್ಳ ಆದರ್ಶ ವನಿತಾ ಸಮಾಜದ ಕುರಿತು ಒಂದಿಷ್ಟು ಮಾಹಿತಿ ಕಲೆಹಾಕಿದಾಗ ಸಿಕ್ಕಿದ್ದು ಆಸಕ್ತಿದಾಯಕ‌ ಸಂಘಟನೆಯ ಕತೆ.



ಸಿದ್ದಾಪುರ ತಾಲೂಕು ಕೊರ್ಲಕಾಯಿ ಗ್ರಾಮದ ಮಹಿಳೆ ವಾಸಂತಿ ಎನ್ನುವವರು 1975 ರಲ್ಲೆ ಈ ಮಹಿಳಾ ಸಂಘಟನೆಯನ್ನು ಹುಟ್ಟುಹಾಕಲು ಶ್ರಮಿಸಿದವರು. ಶಿರಸಿಯ ಚಿಪಗಿಯ ಸಹ್ಯಾದ್ರಿ ಕಾಲನಿಯಲ್ಲಿ ತಮ್ಮದೇ ಆದ ಒಂದಿಷ್ಟು ಜಾಗಕ್ಕಾಗಿ ಹೋರಾಟಮಾಡಿ ಕಟ್ಟಡ ನಿರ್ಮಾಣಮಾಡಿದರು.

ಈ ಕಾರ್ಯಕ್ಕೆ ಇವರ ಕುಟುಂಬದ ಸಹಾಯ ಹೆಚ್ಚಿನದಾಗಿತ್ತು.
ಅವರು ತಮ್ಮ ಹದಿನೇಳನೇ ವರ್ಷಕ್ಕೆ ತವರು ಮನೆಬಿಟ್ಟು ಗಂಡನ ಮನೆ ಸೇರಿದ್ದರು. ಆರ್ಥಿಕವಾಗಿ ಒಂದು ರೂಪಾಯಿ ಕೂಡ ಇಲ್ಲದ ಪೂರ್ವ ಹಂತದಲ್ಲಿ ಮನೆ ಮನೆಗೆ ತಮ್ಮ ಎರಡುವರೆ ವರ್ಷದ ಮಗುವನ್ನು ಕಂಕುಳಲ್ಲಿ ಹೊತ್ತು ಬಿಸಿಲಲ್ಲಿ ಕಾಲ್ನಡಿಗೆಯಲ್ಲಿ ತಿರುಗಿ ಬೇಕಾಗುವ ಮೊತ್ತ ಸಂಗ್ರಹಿಸಿದರು.

ಆ ಕಾಲದಲ್ಲೇ ಇವರು ತಮ್ಮ ಮೆಟ್ರಿಕ್ ಶಿಕ್ಷಣವನ್ನು ಮುಗಿಸಿದವರು‌. "ಎಂದಿಗೂ ಸುಮ್ಮನೆ ಮನೆಯಲ್ಲಿ ಕೂರಬಾರದು ಸದಾ ಕಾರ್ಯೋನ್ಮುಖರಾಗಿರಬೇಕು ಎನ್ನುವ ಹಂಬಲ ನನ್ನನ್ನು  ಮನೆಯಲ್ಲಿ ಕೂರಲು ಬಿಡಲಿಲ್ಲ" ಎನ್ನುತ್ತಾರೆ ವಾಸಂತಿ ಅಮ್ಮ‌. ಊರೂರು ತಿರುಗುವುದು, ಕೈಗಾರಿಕೆ, ಕ್ರೋಷಾ, ಕಸೂತಿ, ಅಲಂಕಾರ ವಸ್ತು ತಯಾರಿಕೆ, ಪರಿಸರ ಹೊರಾಟ ಇಷ್ಟು ತಮ್ಮಿಷ್ಟದ ಹವ್ಯಾಸ ಎಂದು ಅವರು ತಿಳಿಸಿದ್ದಾರೆ.

ಮಹಿಳಾ ಸಮಾಜ ನಿರ್ಮಾಣವಾದಾಗ ಮೊದ ಮೊದಲು ಸಭೆ ಸೇರಲು ಕೆಲವರು ಅಂಜುತ್ತಿದ್ದರು. ಸಾಮಾಜಿಕವಾಗಿ ಮಹಿಳೆಯರಿಗೆ ಅಷ್ಟು ಸ್ವಾತಂತ್ರ್ಯವಿಲ್ಲದ ಕಾಲದಲ್ಲಿ ಇವರು ಮಹಿಳಾ ಸಂಘಟನೆ ಮಾಡಿ ಅವರೊಟ್ಟಿಗೆ ಹಲವು ಪರಿಸರ ಚಳುವಳಿಯಲ್ಲಿ ಪಾಲ್ಗೊಂಡರು.‌ ಶರಾವತಿ ಅಣೆಕಟ್ಟು, ಗಣಿ, ಕೈಗಾ ಹೀಗೆ ಪರಿಸರದ ಕುರಿತು ಕಾಳಜಿ ತೋರಿದರು.

ನಂತರ ಇವರ ಪ್ರಯತ್ನ ನೋಡಿ ಸರ್ಕಾರ ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಉಳಿತಾಯ ಯೋಜನೆ ಮೂಲಕ ಸಹಾಯ ತೊರಕಿತು.‌ ವತ್ಸಲಾ ಪ್ರಾತಕ್ಕಾಲ, ನಾಗರಾಜ್ ಮತ್ತು ಲೀಲಮ್ಮಾ ಎಂಬ ತ್ರಿಮೂರ್ತಿಗಳೇ ಪೋಸ್ಟನ ಮೂಲಕ ಆದಾಯದ ದೃಢತೆತಂದು 12 ಗುಂಟೆ ಮೊದಲು ಮುಡಿಪಿಟ್ಟು ನಂತರ 5 ಗುಂಟೆ ಜಾಗ ದೊರೆತು ಅದರಲ್ಲಿ ಕಟ್ಟಡ ನಿರ್ಮಾಣ ಮಾಡಲಾಯಿತು.

ನಂತರ ಪ್ರತೀ ವರ್ಷ ಪ್ರಚಾರ ಮಾಡಿ ಮಹಿಳಯರ ಸದಸ್ಯತ್ವವನ್ನು ಮಾಡಿಸಿ ಐನೂರಕ್ಕೂ ಹೆಚ್ಚು ಜನರು ವನಿತಾ ಸಮಾಜವನ್ನು ಸೇರಿಕೊಂಡರು. ಈಗಲೂ ಈ ವನಿತಾ ಸಮಾಜ ಪ್ರಚಲಿತವಾಗಿದ್ದು ಎಷ್ಟೋ ಮಹಿಳೆಯರಿಗೆ ಸಹಾಯಕವಾಗಿದೆ. ಇಪ್ಪತ್ತೆಂಟು ವರ್ಷ ಸಂಸ್ಥಾಪಕ ಅಧ್ಯಕ್ಷರಾಗಿ ವಾಸಂತಿ ಅವರೆ ಕಾರ್ಯ‌ನಿರ್ವಹಿಸಿದರು. ನಂತರ  ಭಾಗೀರಥಿ, ಅಹಲ್ಯಾ, ಮತ್ತು ಸೀತಾ ಎನ್ನುವವರು ಅಧ್ಯಕ್ಷತೆವಹಿಸಿ ಮುಂದುವರೆಸಿಕೊಂಡು ಬಂದಿದ್ದಾರೆ.

ಹೊಲಿಗೆ, ಶೋರ್ಟ ಹ್ಯಾಂಡ್ ಟೈಪಿಂಗ್,  (1978 - 82 )  ಯೋಗ, ನೃತ್ಯ ಮತ್ತು ಕಟ್ಟಡದ ಬಾಡಿಗೆ ಹಣದಿಂದ ವೆಚ್ಚ ನಿರ್ವಹಣೆ ಮಾಡಿ 2000ದಲ್ಲಿ ಬೆಳ್ಳಿ ಭವನ ಎಂಬ ಹೆಸರಿನಲ್ಲಿ ಸಭಾಭವನ ನಿರ್ಮಿಸಿದರು. ಇಂದಿಗೂ ಇಲ್ಲಿ ನಾಟಕ, ಯಕ್ಷಗಾನ, ಭರತನಾಟ್ಯ, ಭಜನೆ ಮತ್ತು ಸಂಗೀತ ಹೀಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಅಡಿಗೆ, ರಂಗೋಲಿ ಸ್ಪರ್ಧೆ, ಸ್ಪೋಕನ್ ಇಂಗ್ಲಿಷ್ ತರಗತಿ, ಹೊಳೆ ಊಟ, ಬೆಳದಿಂಗಳೂಟ, ಪ್ರಾಣ ಚೈತನ್ಯ ಚಿಕಿತ್ಸೆ, ಸಂಕ್ರಾಂತಿಗೆ ಬಾಗೀನ, ವಾರ್ಷಿಕೋತ್ಸವ ‌ನಡೆಯುತ್ತದೆ‌. ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತದೆ. ಹಾಗೂ ಒರ್ವ ಬಡ ವಿದ್ಯಾರ್ಥಿನಿಗೆ ದತ್ತಿ ನಿಧಿ ನೀಡಲಾಗುತ್ತದೆ.

ನಿರಂತರವಾಗಿ ಈ ಎಲ್ಲಾ ಚಟುವಟಿಕೆ ನಡೆದುಕೊಂಡು ಬಂದಿರುವ ಗುಟ್ಟು ಎಂದರೆ‌ ಒಗ್ಗಟ್ಟು " ಒಗ್ಗಟ್ಟು ಇಲ್ಲದಿರೆ ಬಿಕ್ಕಟ್ಟು " ಮಾಡುವ ಕಾರ್ಯದಲ್ಲಿ ಆತ್ಮತೃಪ್ತಿ ಇದೆ ಎಂದಿದ್ದಾರೆ ವಾಸಂತಿ ಅಮ್ಮ.

ಸುಮಾ.ಕಂಚೀಪಾಲ್

Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...