Skip to main content

ನಾರಿ ಶಕ್ತಿ


ಆದರ್ಶವನಿತಾ ಸಮಾಜ ಎಂದರೆ‌ ಉತ್ತರ ಕನ್ನಡದ ಶಿರಸಿಯ ನಾರಿಯರಿಗೆ ಶಕ್ತಿ ತುಂಬುವ ಕೇಂದ್ರ‌. ಸಕ್ರಿಯವಾಗಿ ತಮ್ಮನ್ನು ಸದಾ ಚಲನಶೀಲವಾಗಿರಿಸಿಕೊಳ್ಳಲು ದಾರಿ ತೋರಿದ ಒಂದು ಮಾರ್ಗ. ಹಲವು ವರ್ಷಗಳ ಇತಿಹಾಸವುಳ್ಳ ಆದರ್ಶ ವನಿತಾ ಸಮಾಜದ ಕುರಿತು ಒಂದಿಷ್ಟು ಮಾಹಿತಿ ಕಲೆಹಾಕಿದಾಗ ಸಿಕ್ಕಿದ್ದು ಆಸಕ್ತಿದಾಯಕ‌ ಸಂಘಟನೆಯ ಕತೆ.



ಸಿದ್ದಾಪುರ ತಾಲೂಕು ಕೊರ್ಲಕಾಯಿ ಗ್ರಾಮದ ಮಹಿಳೆ ವಾಸಂತಿ ಎನ್ನುವವರು 1975 ರಲ್ಲೆ ಈ ಮಹಿಳಾ ಸಂಘಟನೆಯನ್ನು ಹುಟ್ಟುಹಾಕಲು ಶ್ರಮಿಸಿದವರು. ಶಿರಸಿಯ ಚಿಪಗಿಯ ಸಹ್ಯಾದ್ರಿ ಕಾಲನಿಯಲ್ಲಿ ತಮ್ಮದೇ ಆದ ಒಂದಿಷ್ಟು ಜಾಗಕ್ಕಾಗಿ ಹೋರಾಟಮಾಡಿ ಕಟ್ಟಡ ನಿರ್ಮಾಣಮಾಡಿದರು.

ಈ ಕಾರ್ಯಕ್ಕೆ ಇವರ ಕುಟುಂಬದ ಸಹಾಯ ಹೆಚ್ಚಿನದಾಗಿತ್ತು.
ಅವರು ತಮ್ಮ ಹದಿನೇಳನೇ ವರ್ಷಕ್ಕೆ ತವರು ಮನೆಬಿಟ್ಟು ಗಂಡನ ಮನೆ ಸೇರಿದ್ದರು. ಆರ್ಥಿಕವಾಗಿ ಒಂದು ರೂಪಾಯಿ ಕೂಡ ಇಲ್ಲದ ಪೂರ್ವ ಹಂತದಲ್ಲಿ ಮನೆ ಮನೆಗೆ ತಮ್ಮ ಎರಡುವರೆ ವರ್ಷದ ಮಗುವನ್ನು ಕಂಕುಳಲ್ಲಿ ಹೊತ್ತು ಬಿಸಿಲಲ್ಲಿ ಕಾಲ್ನಡಿಗೆಯಲ್ಲಿ ತಿರುಗಿ ಬೇಕಾಗುವ ಮೊತ್ತ ಸಂಗ್ರಹಿಸಿದರು.

ಆ ಕಾಲದಲ್ಲೇ ಇವರು ತಮ್ಮ ಮೆಟ್ರಿಕ್ ಶಿಕ್ಷಣವನ್ನು ಮುಗಿಸಿದವರು‌. "ಎಂದಿಗೂ ಸುಮ್ಮನೆ ಮನೆಯಲ್ಲಿ ಕೂರಬಾರದು ಸದಾ ಕಾರ್ಯೋನ್ಮುಖರಾಗಿರಬೇಕು ಎನ್ನುವ ಹಂಬಲ ನನ್ನನ್ನು  ಮನೆಯಲ್ಲಿ ಕೂರಲು ಬಿಡಲಿಲ್ಲ" ಎನ್ನುತ್ತಾರೆ ವಾಸಂತಿ ಅಮ್ಮ‌. ಊರೂರು ತಿರುಗುವುದು, ಕೈಗಾರಿಕೆ, ಕ್ರೋಷಾ, ಕಸೂತಿ, ಅಲಂಕಾರ ವಸ್ತು ತಯಾರಿಕೆ, ಪರಿಸರ ಹೊರಾಟ ಇಷ್ಟು ತಮ್ಮಿಷ್ಟದ ಹವ್ಯಾಸ ಎಂದು ಅವರು ತಿಳಿಸಿದ್ದಾರೆ.

ಮಹಿಳಾ ಸಮಾಜ ನಿರ್ಮಾಣವಾದಾಗ ಮೊದ ಮೊದಲು ಸಭೆ ಸೇರಲು ಕೆಲವರು ಅಂಜುತ್ತಿದ್ದರು. ಸಾಮಾಜಿಕವಾಗಿ ಮಹಿಳೆಯರಿಗೆ ಅಷ್ಟು ಸ್ವಾತಂತ್ರ್ಯವಿಲ್ಲದ ಕಾಲದಲ್ಲಿ ಇವರು ಮಹಿಳಾ ಸಂಘಟನೆ ಮಾಡಿ ಅವರೊಟ್ಟಿಗೆ ಹಲವು ಪರಿಸರ ಚಳುವಳಿಯಲ್ಲಿ ಪಾಲ್ಗೊಂಡರು.‌ ಶರಾವತಿ ಅಣೆಕಟ್ಟು, ಗಣಿ, ಕೈಗಾ ಹೀಗೆ ಪರಿಸರದ ಕುರಿತು ಕಾಳಜಿ ತೋರಿದರು.

ನಂತರ ಇವರ ಪ್ರಯತ್ನ ನೋಡಿ ಸರ್ಕಾರ ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಉಳಿತಾಯ ಯೋಜನೆ ಮೂಲಕ ಸಹಾಯ ತೊರಕಿತು.‌ ವತ್ಸಲಾ ಪ್ರಾತಕ್ಕಾಲ, ನಾಗರಾಜ್ ಮತ್ತು ಲೀಲಮ್ಮಾ ಎಂಬ ತ್ರಿಮೂರ್ತಿಗಳೇ ಪೋಸ್ಟನ ಮೂಲಕ ಆದಾಯದ ದೃಢತೆತಂದು 12 ಗುಂಟೆ ಮೊದಲು ಮುಡಿಪಿಟ್ಟು ನಂತರ 5 ಗುಂಟೆ ಜಾಗ ದೊರೆತು ಅದರಲ್ಲಿ ಕಟ್ಟಡ ನಿರ್ಮಾಣ ಮಾಡಲಾಯಿತು.

ನಂತರ ಪ್ರತೀ ವರ್ಷ ಪ್ರಚಾರ ಮಾಡಿ ಮಹಿಳಯರ ಸದಸ್ಯತ್ವವನ್ನು ಮಾಡಿಸಿ ಐನೂರಕ್ಕೂ ಹೆಚ್ಚು ಜನರು ವನಿತಾ ಸಮಾಜವನ್ನು ಸೇರಿಕೊಂಡರು. ಈಗಲೂ ಈ ವನಿತಾ ಸಮಾಜ ಪ್ರಚಲಿತವಾಗಿದ್ದು ಎಷ್ಟೋ ಮಹಿಳೆಯರಿಗೆ ಸಹಾಯಕವಾಗಿದೆ. ಇಪ್ಪತ್ತೆಂಟು ವರ್ಷ ಸಂಸ್ಥಾಪಕ ಅಧ್ಯಕ್ಷರಾಗಿ ವಾಸಂತಿ ಅವರೆ ಕಾರ್ಯ‌ನಿರ್ವಹಿಸಿದರು. ನಂತರ  ಭಾಗೀರಥಿ, ಅಹಲ್ಯಾ, ಮತ್ತು ಸೀತಾ ಎನ್ನುವವರು ಅಧ್ಯಕ್ಷತೆವಹಿಸಿ ಮುಂದುವರೆಸಿಕೊಂಡು ಬಂದಿದ್ದಾರೆ.

ಹೊಲಿಗೆ, ಶೋರ್ಟ ಹ್ಯಾಂಡ್ ಟೈಪಿಂಗ್,  (1978 - 82 )  ಯೋಗ, ನೃತ್ಯ ಮತ್ತು ಕಟ್ಟಡದ ಬಾಡಿಗೆ ಹಣದಿಂದ ವೆಚ್ಚ ನಿರ್ವಹಣೆ ಮಾಡಿ 2000ದಲ್ಲಿ ಬೆಳ್ಳಿ ಭವನ ಎಂಬ ಹೆಸರಿನಲ್ಲಿ ಸಭಾಭವನ ನಿರ್ಮಿಸಿದರು. ಇಂದಿಗೂ ಇಲ್ಲಿ ನಾಟಕ, ಯಕ್ಷಗಾನ, ಭರತನಾಟ್ಯ, ಭಜನೆ ಮತ್ತು ಸಂಗೀತ ಹೀಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಅಡಿಗೆ, ರಂಗೋಲಿ ಸ್ಪರ್ಧೆ, ಸ್ಪೋಕನ್ ಇಂಗ್ಲಿಷ್ ತರಗತಿ, ಹೊಳೆ ಊಟ, ಬೆಳದಿಂಗಳೂಟ, ಪ್ರಾಣ ಚೈತನ್ಯ ಚಿಕಿತ್ಸೆ, ಸಂಕ್ರಾಂತಿಗೆ ಬಾಗೀನ, ವಾರ್ಷಿಕೋತ್ಸವ ‌ನಡೆಯುತ್ತದೆ‌. ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತದೆ. ಹಾಗೂ ಒರ್ವ ಬಡ ವಿದ್ಯಾರ್ಥಿನಿಗೆ ದತ್ತಿ ನಿಧಿ ನೀಡಲಾಗುತ್ತದೆ.

ನಿರಂತರವಾಗಿ ಈ ಎಲ್ಲಾ ಚಟುವಟಿಕೆ ನಡೆದುಕೊಂಡು ಬಂದಿರುವ ಗುಟ್ಟು ಎಂದರೆ‌ ಒಗ್ಗಟ್ಟು " ಒಗ್ಗಟ್ಟು ಇಲ್ಲದಿರೆ ಬಿಕ್ಕಟ್ಟು " ಮಾಡುವ ಕಾರ್ಯದಲ್ಲಿ ಆತ್ಮತೃಪ್ತಿ ಇದೆ ಎಂದಿದ್ದಾರೆ ವಾಸಂತಿ ಅಮ್ಮ.

ಸುಮಾ.ಕಂಚೀಪಾಲ್

Comments

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...