Skip to main content

ಗಂಗು, ಗಂಗೂಬಾಯಿ

ಇತ್ತೀಚೆಗೆ ಬಿಡುಗಡೆಯಾದ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ನಿಜಕ್ಕೂ ಭಾವನಾತ್ಮಕವಾದದ್ದು. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಎಂದಾಕ್ಷಣ ಪ್ರೇಕ್ಷಕರ ನಿರೀಕ್ಷೆ ಬೇರೆಯದ್ದೇ ಇರುತ್ತದೆ. ಆ ನಿರೀಕ್ಷೆಯನ್ನು ಹುಸಿಗೊಳಿಸದ ಸಿನಿಮಾ ಇದು ಎಂದೇ ಹೇಳಬಹುದು. ಬಿಳಿ ಸೀರೆ, ಕಾಸಗಲದ ಕೆಂಪು ಹಣೆಬಟ್ಟು, ಎಡಗೆನ್ನೆಯ ಮೇಲೊಂದು ಕಪ್ಪುಗುರುತು, ಢಾಳಾಗಿ ಕಾಣು ಕೆಂಪು ತುಟಿ ಬಣ್ಣ ಇವಿಷ್ಟು ಗಂಗೂಬಾಯಿ ಬಾಹ್ಯ ಚಹರೆ. ಇದಕ್ಕಿಂತ ಭಿನ್ನ ಅವಳ ಅಂತರಂಗ. ಎದೆಯಲ್ಲಿ ಬೆಂಕಿ ಮೊಗದಲ್ಲಿ ಗುಲಾಬಿ ನಗು ತುಂಬಿಕೊಂಡಿರುವ ಕುಮಾರಿಯೂ ಅಲ್ಲ ಶ್ರೀಮತಿಯೂ ಅಲ್ಲದ ವೇಶ್ಯೆ ಅಂತರಂಗ.

ಪ್ರಿಯತಮನಿಂದ ಕನಸಲ್ಲಿಯೂ ಬಯಸದ ಬಲೆಯಲ್ಲಿ ಬಿದ್ದು ಸಿನಿಮಾ ನಾಯಕಿಯಾಗಲು ಬಂದಿರುವ ಗಂಗು ಮುಂಬೈ ಸೇರಿ ವೇಶ್ಯೆಯಾಗುತ್ತಾಳೆ. ನಾಯಕಿಯಾಗಿ ನಟಿಸಬೇಕೆಂಬ ಆಶಯ ಹೊತ್ತು ಬಂದವಳ ಜೀವನವೇ ಕೊನೆಗೆ ಸಿನಿಮಾ ಆಗುತ್ತದೆ. ನಟಿ ಆಲಿಯಾ ಭಟ್ ಚಿತ್ರದಲ್ಲಿ ಮುಖ್ಯಪಾತ್ರ ವಹಿಸಿದ್ದು ಪ್ರತಿಯೊಂದು ಮಾತು, ಅಭಿನಯ ಜನರ ಮನಮುಟ್ಟುವಂತೆ ಅಭಿನಯಿಸಿದ್ದಾರೆ‌.

ದರ್ಪದ ಗಂಡಸರ ಬುದ್ದಿ, ರಾಜಕೀಯ ವ್ಯವಸ್ಥೆ, ಕಠು ಟೀಕೆ, ಹೆಣ್ಣಿನ ದೈಹಿಕ ಮತ್ತು ಮಾನಸಿಕ ವೇದನೆಗಳನ್ನು ಕಟ್ಟಿಕೊಟ್ಟ ಚಿತ್ರವಿದು. ಬೇಡ ಬೇಡವೆಂದರು ಹತ್ತಾರು ಬಾರಿ ಭಾವುಕರಾಗುವಂತಹ ಸನ್ನಿವೇಶ ಎದುರಾಗುತ್ತದೆ. ತಂದೆ ತಾಯಿಯರನ್ನು ನೋಡಬೇಕು ಎಂಬ ಹಂಬಲ. ಅವರು ಮತ್ತೆ ಸ್ವೀಕರಿಸುವುದಿಲ್ಲ ಎಂಬ ದುಗುಡ ಎಲ್ಲವನ್ನೂ ಮನಸಿನ ಚೀಲದಲ್ಲಿ ತುಂಬಿಕೊಂಡ ಹತ್ತಾರು ಹೆಣ್ಣುಮಕ್ಕಳು ಒಂದೇ ಸಾರಾಂಶವಿರುವ ಪತ್ರವನ್ನು ಒಕ್ಕೊರಲಿನಿಂದ ಧ್ವನಿಸುವ ಚಿತ್ರ, ವೇಶ್ಯೆಯೊಬ್ಬಳ ಮಕ್ಕಳನ್ನು ಶಾಲೆ ಮತ್ತು ಸಮಾಜದಲ್ಲಿ ಅವಮಾನಿಸುವ ರೀತಿ, ಮುಂದೊಂದುದಿನ ತಾನು ಸಮಾಜದಲ್ಲಿ ತಲೆ ಎತ್ತಿ ನಿಲ್ಲುತ್ತೇನೆ ಎಂಬ ಅವಳ ಭದ್ರ ಭರವಸೆ ಎಲ್ಲವೂ ಈ ಚಿತ್ರದ ಜೋರಾದ ಧ್ವನಿಯಲ್ಲಿ ಸಾರುತ್ತದೆ.

ಇನ್ನು ಅಲ್ಲಿನ ಬೀದಿಗಳ ಚಿತ್ರಣ, ಮನಸಿಗೆ ಇಷ್ಟವಿಲ್ಲದಿದ್ದರೂ ಕೈಬೀಸಿ ತಮ್ಮ ಗ್ರಾಹಕರನ್ನು ಕರೆಯುವ ದೃಶ್ಯ, ಇಷ್ಟವಿಲ್ಲದೆಯೂ ದಿನವೂ ತಮ್ಮನ್ನು ತಾವೇ ಅಲಂಕರಿಸಿಕೊಳ್ಳುವ ಸ್ಥಿತಿ ಎಷ್ಟು ಕ್ರೂರ ಎಂಬುದನ್ನು ಸ್ವತಃ ಅವರ ಧ್ವನಿಯಲ್ಲೇ ಆಲಿಸುವಂತೆ ಮಾಡುತ್ತದೆ ಈ ಚಿತ್ರ. ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುವ ರೀತಿಯಲ್ಲಿ ಇತಿಹಾಸವಾಗಿದ್ದಾಳೆ ಗಂಗೂಬಾಯಿ. ‌ಚಿತ್ರದ ದೃಶ್ಯಭಾಷೆಯೂ ಅಮೋಘ ಅನುಭವ ನೀಡುತ್ತದೆ.

 ಸುಮಾ.ಕಂಚೀಪಾಲ್TV 9

Comments

Post a Comment

Popular posts from this blog

ಅನು ಮದುವೆ ಶುರು

ಬೆಳ್ಳಂಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ ಸಿರಸಿಗೆ ಬಂದು ಇಳಿದಾಯ್ತು, "ನನ್ನ ಗೆಳತಿಯಾ ಮದುವೆ ಬಲು ಜೋರು ಜೋರು ಜೋರು" ಎನ್ನುತ್ತಾ ಮಡಗಾಂ ಬಸ್ ಹತ್ತಿ ಸೀದಾ ಹೆಗಡೆಕಟ್ಟೆಗೆ ಬಂದು ಇಳಿದೆ. ನಂತರ ಅಲ್ಲಿಂದ ಬಾಡಿಗೆ ಬೈಕು. ಗಂಟೆ ಏಳಾಗುವ ಮುನ್ನವೇ ನಾನು ಅವಳ ಮನೆ ತಲುಪಿದೆ. ಅಷ್ಟಕ್ಕೂ ಇಂದು ಅವಳ ಮದುವೆ ಅಲ್ಲ ನಾಂದಿ. ಅಪ್ಪಟ ಹಳ್ಳಿ ಶೈಲಿಯ ಮನೆ. ಮರದ ಮೆತ್ತು. ಮೀಯಲು ಬಿಸಿ ಬಿಸಿ ಹಂಡೆ ನೀರು.  ನಾನು ಜಾಕೀಟು, ಜರ್ಕೀನು, ಜೀನ್ಸು ಎನ್ನುತ್ತಾ ಬೆಂಗಳೂರು ವೇಷ ಕಳಚಿ ಸ್ನಾನ ಮಾಡಿ ಕೂಸಿನಿಂದ ಹೆಂಗಸಾಗತೊಡಗಿದೆ. ಹೊರಗಡೆ ಸಾಲು ಸಾಲು ಹಾಡು ಕೇಳುತ್ತಿತ್ತು. ಅಕ್ಷತೆ ಕಲಸುವುದು, ಆರತಿ ಮಾಡುವುದು, ಒನಕೆಯಲ್ಲಿ ಕುಟ್ಟುವುದು ಹೀಗೆ ಏನೇನೋ.. ನನಗೂ ಇಲ್ಲಿಯ ಶಾಸ್ತ್ರಕ್ಕೂ ಸಂಬಂಧವಿಲ್ಲ ಎಂದು ನಾನು ನನ್ನ ಪಾಡಿಗಿದ್ದೆ. ಯಾಕೆಂದರೆ ನನ್ನದು ಯಲ್ಲಾಪುರ. ಇವಳದು ಶಿರಸಿ.  ಇಷ್ಟೆಲ್ಲ ಆದಮೇಲೆ ಹಸಿರು ಶಿಗತೆ ಬಾಳೆಲೆಯಲ್ಲಿ ಅವಲಕ್ಕಿ ಉಪ್ಪಿಟ್ಟು ತಿಂದಾಯ್ತು. ಗೌಜಿ ಹೆಚ್ಚಾಯ್ತು, ತಯಾರಿ ಜೋರಾಯ್ತು.  ಸೀರೆ ಉಡುವ ಕೋಣೆಯೊಂದಾದೆ ಹದಾ ಬೆಳಕು ಬರುವಲ್ಲಿ ಮೇಕಪ್ಪು... ಎಲ್ಲರ ಕೈಯ್ಯಲ್ಲರಿಳದ ಮದರಂಗಿ, ಮದುಮಗಳು ನಿಧಾನಕ್ಕೆ ಮೌನ ತಾಳುತ್ತಿದ್ದಳು. ಈ ಸಂದರ್ಭದಲ್ಲಿ ನಾನು ನನ್ನ ಮದುವೆಯ ಹಿಂದಿನ ದಿನ ಏನೆಲ್ಲ ಆಗಿತ್ತು ಎಂಬುದನ್ನು ನೆನೆಯುತ್ತಾ ಬ್ಲಾಗ್ ಬರೆಯತೊಡಗಿದೆ.  ಅಬ್ಬರವ...

ಅನು ಮದುವೆ

ರಾತ್ರಿ ಪೂರ್ತಿ ಮಾತಾಡುತ್ತಲೇ ಕಳೆಯಿತು. ಕಣ್ಣು ಮುಚ್ಚುವುದರೊಳಗೆ ಬೆಳಗಾಯಿತು. ನಾವೊಂದು ಕಡೆ, ಅನು ಇನ್ನೊಂದು ಕಡೆ ಸೀರೆಯುಟ್ಟು, ನೆರಿಗೆ ಹಿಡಿದು ರೆಡಿಯಾಗುವ ಕೆಲಸ ನಡೆಯಿತು. ನಡುವೆ ನಡುಪಟ್ಟಿ, ಜಡೆಗೆ ಜಡೆಪಟ್ಟಿ, ಹಣೆಗೆ ಹಣೆಪಟ್ಟಿ ಎನ್ನುತ್ತಾ ಏನೊ ಹತ್ತಾರು ರೀತಿಯ ಅಲಂಕಾರ. ಕನ್ನಡಿಯ ಮುಂದೆ ನಿಂತು ಐ ಲೈನರ್ ಹಚ್ಚುವಾಗ ನನಗೆ ಹೆಣ್ಣಿಗೇಕೆ ಇಷ್ಟು ಅಲಂಕಾರ ಎಂಬ ಪ್ರಶ್ನೆ ಮೂಡಿತು.  ಜಡೆತುಂಬ ಮುಡಿದ ಮಲ್ಲಿಗೆ, ಹೆಂಗಸರೇ ಬೇಗ ಎದ್ದು ಬಣ್ಣ ಬಣ್ಣದ ಸೀರೆಗಳನ್ನುಟ್ಟು ಮೈತುಂಬಾ ಬಂಗಾರತೊಟ್ಟು ರೆಡಿ ಆಗಿದ್ದೇ, ಆಗಿದ್ದು ಅಷ್ಟೊತ್ತಿಗೆ ಜೀಪ್ ಬಂತು ಎಲ್ಲರೂ ಅದರೊಳಗಡೆ ಗಡಬಡೆಯಿಂದ ನುಸುಳಿದ್ದು, ನುಸುಳುವ ಮುನ್ನ ಒಂದಷ್ಟು ಪೋಟೋ. ಅದಾದಮೇಲೆ ನಾವು ಗೆಳತಿಯರದ್ದು ಹತ್ತಾರು ಪೋಸು. "ಬಿತ್ತಕ್ಕಿ ಬಟ್ಟಲೆಲ್ಲೇ ಅಕ್ಷತಾ...ಅಕ್ಷತಾ... ಅಕ್ಷತೆ ಎಲ್ಲಿ" ಎಂಬ ಕೂಗಾಟ ಜೀಪು ಹತ್ತಿದೆವೋ "ಅಯ್ಯೋ! ಜಡೆ ಜಾರ್ತು" ಎಂಬ ಅನುಷಾಳ ಅಳಲು.  ಆಮೇಲೆನೋ ಒಂದು ಮಾಡಿ ಆಯಿತು.‌ ಪಂಚಲಿಂಗ ದೇವಸ್ಥಾನ ಬಂತು. ನಾವೆಲ್ಲಾ ಬರೊಬ್ಬರಿ ಫೋಟೋ ತೆಗೆದುಕೊಂಡದ್ದಾಯ್ತು. ಜೊತೆಗೆ ನನಗೆ ಆಗಾಗ ನನ್ನವನ ನೆನಪು ಅದನ್ನೆಲ್ಲ ಮೆಲ್ಲುತ್ತಾ ಬ್ರೈಡ್ಸ್ ಮೇಡ್ ಅಂತಾರಲ್ಲಾ ಹಾಗೆ ಅವಳು ಹೋದಲೆಲ್ಲಾ ಹೋಗಿ ಕೇಳಿದ್ದೆಲ್ಲ ಕೈಗಿಡು ಕಾರ್ಯ ಸಾಗುತ್ತಿತ್ತು.  ನಾವೇ ಆ ಮೂವರು "ಅನು, ನಿಧಿ...

ಹೊಸ ಪಯಣ

ನಿಧಿಗೆ ಒಂದು ಒತ್ತಾಸೆ. ಅದೇನಂದ್ರೆ ಅವಳ ಎಂಗೇಜ್ಮೆಂಟ್‌ ಮತ್ತೆ ಮದುವೆಯ ಬಗ್ಗೆ ನಾನು ಬ್ಲಾಗ್‌ ಬರಿಬೇಕು ಅಂತ. ಬ್ಲಾಗೇನೋ ಬರಿತಿದ್ದೆ ಆದ್ರೆ ಅಪ್ಪನ ಅನಾರೋಗ್ಯದ ಕಾರಣ ಊರಲ್ಲೇ ಇದ್ರೂ ಅವಳ ಎಂಗೇಜ್ಮೆಂಟ್‌ಗೆ ನಾನು ಹೋಗೋಕೆ ಆಗ್ಲೇ ಇಲ್ಲ. ಹೀಗೆ ಮಧ್ಯಾಹ್ನ ಹೊತ್ತು ಖಾಲಿ ಕೂತಿದ್ದಾಗ ಒಂದು ಬ್ಲಾಗ್‌ ಬರೆಯೋಣ ಅನಿಸಿತು. ಅಲ್ಲಿಗೆ ಹೋಗದೇ ಇದ್ದರೂ ನಾನು ಅವಳನ್ನು ಕಂಡದ್ದು ಹೇಗೆ ಎಂದು ಬರಿತೀನಿ ನೋಡಿ.  ಯಾರೋ ತೀರಿಕೊಂಡ ಕಾರಣ ರವಿವಾರ ನಡೆಯಬೇಕಿದ್ದ ಎಂಗೇಜ್ಮೆಂಟ್‌ ಸೋಮವಾರ ನಡೆಯಿತು. ಒಂದು ಸಲ ಅಯ್ಯೋ ಎಂದೆನಿಸದರೂ ಸಹ ಅದರ ಮರುದಿನ ಅಂದರೆ ಸೋಮವಾರ ನಿಶ್ಚಿತಾರ್ಥ ಆಯ್ತು. ತಯಾರಿ ಆಗಿರಲಿಲ್ಲ ಎಂಬ ಮಾತಿಲ್ಲ ಯಾಕೆಂದರೆ ಒಂದು ದಿನ ಹೆಚ್ಚೇ ಸಮಯ ಸಿಕ್ಕಂತಾಗಿತ್ತು. ಕೊನೆ ಘಳಿಗೆಯಲ್ಲಾಗುವ ಗಡಿಬಿಡಿಯಂತು ಇದ್ದದ್ದೇ ಬಿಡಿ. ಅಣ್ಣ, ಅತ್ತಿಗೆ ಮುದ್ದಾದ ಸೊಸೆ  ಹೀಗೆ ಹತ್ತಿರದವರೆಲ್ಲ ಆಗಲೇ ಬಂದು ಸೇರಿದ್ದರು. ಗೆಳತಿಯರೇ ಸ್ವಲ್ಪ ಗೈರು ಹಾಜಾರಾದದ್ದು. ಆದರೆ ಬಾಲ್ಯದ ಗೆಳತಿ ಅನುಷಾ ಜೊತೆಯಲ್ಲೇ ಇದ್ದಳು. ಉಂಗುರ ಇಡಲು ಅಂದದೊಂದು ಸಿಂಗಾರ ಬಟ್ಟಲು ರೆಡಿ ಇತ್ತು. ಹುಡುಗನ ಪ್ರೆಂಡ್ಸ್‌ ತಮ್ಮ ಶಕ್ತಿ ಪ್ರದರ್ಶನ ತೋರಿದ್ದೂ ಹೌದು. ಅವರ ಮನೆ ಏನು ಇಲ್ಲಿಂದ ದೂರವೇನಲ್ಲ.  ಇನ್ನು ಆ ಕಡೆಯಿಂದಲೂ ಸುಮಾರು ಜನ ಬಂದಿದ್ದರು. ಮುದ್ದು ಸೊಸೆಯಂತು ಕೆಂಪಂಗಿಯಲ್ಲಿ ಗೊಂಬೆಯಂತೆ ಕಂಗೊಳಿಸುತ್ತಿದ...