Skip to main content

ಗಂಗು, ಗಂಗೂಬಾಯಿ

ಇತ್ತೀಚೆಗೆ ಬಿಡುಗಡೆಯಾದ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ನಿಜಕ್ಕೂ ಭಾವನಾತ್ಮಕವಾದದ್ದು. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಎಂದಾಕ್ಷಣ ಪ್ರೇಕ್ಷಕರ ನಿರೀಕ್ಷೆ ಬೇರೆಯದ್ದೇ ಇರುತ್ತದೆ. ಆ ನಿರೀಕ್ಷೆಯನ್ನು ಹುಸಿಗೊಳಿಸದ ಸಿನಿಮಾ ಇದು ಎಂದೇ ಹೇಳಬಹುದು. ಬಿಳಿ ಸೀರೆ, ಕಾಸಗಲದ ಕೆಂಪು ಹಣೆಬಟ್ಟು, ಎಡಗೆನ್ನೆಯ ಮೇಲೊಂದು ಕಪ್ಪುಗುರುತು, ಢಾಳಾಗಿ ಕಾಣು ಕೆಂಪು ತುಟಿ ಬಣ್ಣ ಇವಿಷ್ಟು ಗಂಗೂಬಾಯಿ ಬಾಹ್ಯ ಚಹರೆ. ಇದಕ್ಕಿಂತ ಭಿನ್ನ ಅವಳ ಅಂತರಂಗ. ಎದೆಯಲ್ಲಿ ಬೆಂಕಿ ಮೊಗದಲ್ಲಿ ಗುಲಾಬಿ ನಗು ತುಂಬಿಕೊಂಡಿರುವ ಕುಮಾರಿಯೂ ಅಲ್ಲ ಶ್ರೀಮತಿಯೂ ಅಲ್ಲದ ವೇಶ್ಯೆ ಅಂತರಂಗ.

ಪ್ರಿಯತಮನಿಂದ ಕನಸಲ್ಲಿಯೂ ಬಯಸದ ಬಲೆಯಲ್ಲಿ ಬಿದ್ದು ಸಿನಿಮಾ ನಾಯಕಿಯಾಗಲು ಬಂದಿರುವ ಗಂಗು ಮುಂಬೈ ಸೇರಿ ವೇಶ್ಯೆಯಾಗುತ್ತಾಳೆ. ನಾಯಕಿಯಾಗಿ ನಟಿಸಬೇಕೆಂಬ ಆಶಯ ಹೊತ್ತು ಬಂದವಳ ಜೀವನವೇ ಕೊನೆಗೆ ಸಿನಿಮಾ ಆಗುತ್ತದೆ. ನಟಿ ಆಲಿಯಾ ಭಟ್ ಚಿತ್ರದಲ್ಲಿ ಮುಖ್ಯಪಾತ್ರ ವಹಿಸಿದ್ದು ಪ್ರತಿಯೊಂದು ಮಾತು, ಅಭಿನಯ ಜನರ ಮನಮುಟ್ಟುವಂತೆ ಅಭಿನಯಿಸಿದ್ದಾರೆ‌.

ದರ್ಪದ ಗಂಡಸರ ಬುದ್ದಿ, ರಾಜಕೀಯ ವ್ಯವಸ್ಥೆ, ಕಠು ಟೀಕೆ, ಹೆಣ್ಣಿನ ದೈಹಿಕ ಮತ್ತು ಮಾನಸಿಕ ವೇದನೆಗಳನ್ನು ಕಟ್ಟಿಕೊಟ್ಟ ಚಿತ್ರವಿದು. ಬೇಡ ಬೇಡವೆಂದರು ಹತ್ತಾರು ಬಾರಿ ಭಾವುಕರಾಗುವಂತಹ ಸನ್ನಿವೇಶ ಎದುರಾಗುತ್ತದೆ. ತಂದೆ ತಾಯಿಯರನ್ನು ನೋಡಬೇಕು ಎಂಬ ಹಂಬಲ. ಅವರು ಮತ್ತೆ ಸ್ವೀಕರಿಸುವುದಿಲ್ಲ ಎಂಬ ದುಗುಡ ಎಲ್ಲವನ್ನೂ ಮನಸಿನ ಚೀಲದಲ್ಲಿ ತುಂಬಿಕೊಂಡ ಹತ್ತಾರು ಹೆಣ್ಣುಮಕ್ಕಳು ಒಂದೇ ಸಾರಾಂಶವಿರುವ ಪತ್ರವನ್ನು ಒಕ್ಕೊರಲಿನಿಂದ ಧ್ವನಿಸುವ ಚಿತ್ರ, ವೇಶ್ಯೆಯೊಬ್ಬಳ ಮಕ್ಕಳನ್ನು ಶಾಲೆ ಮತ್ತು ಸಮಾಜದಲ್ಲಿ ಅವಮಾನಿಸುವ ರೀತಿ, ಮುಂದೊಂದುದಿನ ತಾನು ಸಮಾಜದಲ್ಲಿ ತಲೆ ಎತ್ತಿ ನಿಲ್ಲುತ್ತೇನೆ ಎಂಬ ಅವಳ ಭದ್ರ ಭರವಸೆ ಎಲ್ಲವೂ ಈ ಚಿತ್ರದ ಜೋರಾದ ಧ್ವನಿಯಲ್ಲಿ ಸಾರುತ್ತದೆ.

ಇನ್ನು ಅಲ್ಲಿನ ಬೀದಿಗಳ ಚಿತ್ರಣ, ಮನಸಿಗೆ ಇಷ್ಟವಿಲ್ಲದಿದ್ದರೂ ಕೈಬೀಸಿ ತಮ್ಮ ಗ್ರಾಹಕರನ್ನು ಕರೆಯುವ ದೃಶ್ಯ, ಇಷ್ಟವಿಲ್ಲದೆಯೂ ದಿನವೂ ತಮ್ಮನ್ನು ತಾವೇ ಅಲಂಕರಿಸಿಕೊಳ್ಳುವ ಸ್ಥಿತಿ ಎಷ್ಟು ಕ್ರೂರ ಎಂಬುದನ್ನು ಸ್ವತಃ ಅವರ ಧ್ವನಿಯಲ್ಲೇ ಆಲಿಸುವಂತೆ ಮಾಡುತ್ತದೆ ಈ ಚಿತ್ರ. ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುವ ರೀತಿಯಲ್ಲಿ ಇತಿಹಾಸವಾಗಿದ್ದಾಳೆ ಗಂಗೂಬಾಯಿ. ‌ಚಿತ್ರದ ದೃಶ್ಯಭಾಷೆಯೂ ಅಮೋಘ ಅನುಭವ ನೀಡುತ್ತದೆ.

 ಸುಮಾ.ಕಂಚೀಪಾಲ್TV 9

Comments

Post a Comment

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...