Skip to main content

ಬಾವಲಿಗಳು ಪರಿಸರಕ್ಕೆ ಪೂರಕ



ಅಳಿವಿನಂಚಿನಲ್ಲಿರುವ ಬಾವಲಿಗಳು ಅಪಶಕುನವೆಂದು ನಿರಾಕರಣೆಗೊಳ್ಳುತ್ತವೆ. ಆದರೆ  ಬಾವಲಿಗಳು ಪರಿಸರಕ್ಕೆ ಅತೀ ಅವಶ್ಯಕ. ಸದಾ ಗುಂಪಿನಲ್ಲಿ ವಾಸಿಸುವ  ಬಾವಲಿಗಳು ಗುಹೆ,  ಪಾಳುಬಿದ್ದ ಮನೆ, ಹಳೆಯ ಕೊಟೆ, ಹೀಗೆ ನಿರ್ಜನ ಪ್ರದೇಶದಲ್ಲಿ ವಾಸಿಸುತ್ತವೆ.

ಆದರೆ ಉಜಿರೆಯ ಅಜ್ಜರ ಕಲ್ಲು ಮೈದಾನದ ಸುತ್ತಲಿನ ಪ್ರದೇಶದಲ್ಲಿ ಜನ ಸಂಚಾರ ಹಾಗೂ ವಾಹನಗಳ ಶಬ್ಧಗಳ ನಡುವೆಯು ಪ್ಲೇಯಿಂಗ್ ಪಾಕ್ಸ ಎಂಬ ಪ್ರಬೇಧದ ಬಾವಲಿಗಳು  ವಾಸಿಸುತ್ತಿವೆ. ಸಂಜೆಯಾಗುತ್ತಿದ್ದಂತೆ ಆಹಾರ ಹುಡುಕಾಟಕ್ಕೆ ತೆರಳುವ ಈ ನಿಶಾಚರಿ ಬಾವಲಿಗಳು ರಾತ್ರಿ ತಮ್ಮ ಕಾರ್ಯಮುಗಿಸಿ ಬೆಳಕು ಹರಿಯುವ ಮುನ್ನ  ತಮ್ಮ ವಾಸಸ್ಥಾನಕ್ಕೆ ಮರಳುತ್ತವೆ.



ಈ ದೊಡ್ಡ ಬಾವಲಿಗಳು ಹಣ್ಣು ಹಾಗೂ ಹೂವಲ್ಲಿನ ಮಕರಂದ ಹೀರಿ ಜೀವಿಸುತ್ತವೆ. ದೊಡ್ಡ ಬಾವಲಿಗಳು 40 ರಿಂದ 150 ಗ್ರಾಂ ತೂಕವಿದ್ದು, ಒಂದೇ ಹಾರುತ್ತಿರುವಾಗ ಹದ್ದಿನಂತೆ ಕಾಣುತ್ತದೆ.ಕಕತ್ತಲಾಗುತ್ತಿದ್ದಂತೆ ಐದು ನಿಮಿಷ ಆಕಾಶದ ಕಡೆ ಮುಖಮಾಡಿದರೆ ಸಾಕು, ಆಹಾರ ಅರಸಿ ಹೋಗುವ ಬಾವಲಿಗಳ ಹಿಂಡು ಕಾಣುತ್ತದೆ. ಪಕ್ಷಿಗಳಂತೆ ಸ್ವತಂತ್ರವಾಗಿ ಹಾರಾಡುವ ಸಾಮರ್ಥ್ಯವುಳ್ಳ ಏಕೈಕ ಸಸ್ತನಿ ಎಂದರೆ ಅದು ಬಾವಲಿಮಾತ್ರ.


ಶಬ್ದ ತರಂಗಗಳ ಮೂಲಕ ಧ್ವನಿ ಗ್ರಹಿಸುವ ವಿಶೇಷ ಸಾಮರ್ಥ್ಯವನ್ನು ಬಾವಲಿಗಳು ಹೊಂದಿವೆ. ಬಾವಲಿಗಳಲ್ಲಿ ಇತರ ಪ್ರಾಣಿಗಳಂತೆ ಗಡಿ ಸಮಸ್ಯೆಯೂ ಇರುತ್ತದೆ, ಇದಕ್ಕಾಗಿ ಕೆಲ ಸಂಧರ್ಭದಲ್ಲಿ ಇವುಗಳ ನಡುವೆ ಕಾದಾಟ ನಡೆಯುತ್ತದೆ.

ಬಾವಲಿಗಳ ಸಂತತಿ ಅವನತಿಯತ್ತ ಸಾಗುತ್ತಿದ್ದು ಅವುಗಳ ರಕ್ಷಣೆ ಮಾಡುವ ಹೊಣೆಗಾರಿಕೆ ನಮ್ಮದಾಗಿದೆ.‌ ಇವುಗಳ ಕುರಿತಾದ ಅಧ್ಯಯನದ ಅವಶ್ಯಕತೆಯೂ ಇದೆ. ಇಲ್ಲವಾದಲ್ಲಿ ನಮ್ಮ ಗಮನಕ್ಕೆ ಬಾರದಂತೆ ಪರಿಸರದಲ್ಲಿ ಏರುಪೇರಾಗುವುದು ಖಂಡಿತ.

ಪರಿಸರ ಬೆಳೆಸುವಲ್ಲಿ ಬೀಜಪ್ರಸರಣ ಮಾಡುವಲ್ಲಿ ಬಾವಲಿಗಳ ಪಾತ್ರ ಬಹಳ ಮುಖ್ಯ. ಆಹಾರವಾಗಿ ತಿಂದ ಹಣ್ಣುಗಳ ಬೀಜವನ್ನು ತಮ್ಮ ಹಿಕ್ಕೆಯ ಮೂಲಕ ಬಾವಲಿಗಳು ಪ್ರಸರಣ ಮಾಡುತ್ತವೆ. ರಾತ್ರಿಹೊತ್ತು ಅರಳುವ ಎಷ್ಟೋ ಹೂವುಗಳ ಪರಾಗಸ್ಪರ್ಶ ಮಾಡುತ್ತವೆ. ಮತ್ತು ಗಂಟೆಗೆ ಸಾವಿರಕ್ಕೂ ಅಧಿಕ ಕೀಟಗಳನ್ನು ಇವು ತಿನ್ನುತ್ತವೆ. ಇವುಗಳ ಗೊಬ್ಬರಕ್ಕೆ ದೇಶ - ವಿದೇಶಗಳಲ್ಲಿ ಭಾರಿ ಬೇಡಿಕೆ ಇದೆ.

-ಮನೋಜ್ ಗೊಡಬೊಲೆ
ಸಹಾಯಕ ಪ್ರಾಧ್ಯಾಪಕರು ಜೈವಿಕ ತಂತ್ರಜ್ಞಾನ ವಿಭಾಗ

ಸುಮಾ.ಕಂಚೀಪಾಲ್



Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಮಳೆಹನಿ

ಮಳೆ ಇದೊಂದೇ ಪದ ಸಾಕು ಅಲ್ವಾ ಮನಸ್ಸಿಗೆ ಖುಷಿ ಕೊಡೋದಕ್ಕೆ, ಇದು ಎಷ್ಟೋ ಜನರ ಹಂಬಲ ಆಗಿರತ್ತೆ. ಪ್ರಕೃತಿನ ಯಾರು ಜೀವಸ್ತಾರೋ ಅವರಿಗೆ ಇದು ಹಬ್ಬ ಅಂತಾನೆ ಹೇಳ್ಬಹುದು. ಎಷ್ಟೋ ಜನ ಈ ಮಳೆ ಯಾಕಾದ್ರೂ ಬಂತಪ್ಪಾ ಅಂತ ಅಂದ್ಕೊಳೋರು ಇರ್ತಾರೆ, ಪ್ರಪಂಚ ಅಂದ್ರೆ ಹಾಗೆ ಅಲ್ವ ಎಲ್ಲ ರೀತಿಯ ಜನರೂ ಇರ್ತಾರೆ. ಇದನ್ನ ನಾನ್ ಬರಿಬೇಕಾದ್ರೆ ನಂಗ್ ಆಗ್ತಾ ಇದ್ಯಲ್ಲ ಆ ಅನುಭವನ ಅನುಭವಿಸಿ ಬರೀತಾ ಇದೀನಿ. ಒಂದ್ಕಡೆ ಹಕ್ಕಿಗಳ ಚಿಲಿಪಿಲಿ, ಇನ್ನೊಂದ್ ಕಡೆ ಕಪ್ಪೆಗಳ ಸದ್ದು, ಮೊದಲನೇ ಸಲ ನೋಡೋರಿಗೆ ಇದು ಕಿರಿಕಿರಿ ಇರಬಹುದು, ಅದೇ ವಾತಾವರಣದಲ್ಲಿ ಇರುವವರಿಗೆ ಅದು ಸಾಮಾನ್ಯ. ನಮ್ಮ ಮನೆ ಇರೋದು ಇದೆ ಪ್ರಕೃತಿಯ ಮಡಿಲಿನಲ್ಲಿ ಸುತ್ತಮುತ್ತ ಬೆಟ್ಟ ,ಮನೆಮುಂದೆ ಹಳ್ಳ,ಗದ್ದೆ,ತೋಟ. ಇದೇ ನಂದೊಂದು ಪುಟ್ಟ ಪ್ರಪಂಚ. ಮಳೆಗಾಲ ಬಂತು ಅಂದ್ರೆ ಗದ್ದೆ ಹೂಡೋದು, ನೆಟ್ಟಿ ಇದೆಲ್ಲ ಎಸ್ಟ್ ಚಂದ ಅಲ್ವಾ? ನಾವು ಹೈಸ್ಕೂಲಿಗೆ ಹೋಗೋವಾಗಿಂದ ಬೇರೆಕಡೆ ಉಳಿದುಕೊಂಡು ಹೋಗ್ಬೇಕಾಗಿತ್ತು. ಆಗ ನಾವು ಮನೆನ ತುಂಬಾ ಮಿಸ್ ಮಾಡ್ಕೋತಾ ಇದ್ವಿ, ಶನಿವಾರ ಯವಾಗಪ್ಪ ಬರತ್ತೆ? ಯಾವಾಗ ಮನೆಗ್ ಹೋಗ್ತೀವಿ? ಅಂತ ಯೋಚನೆ ಆರಂಭವಾಗ್ತಾ ಇತ್ತು. ಎಸ್ಟ್ ಮಜಾ ಅಲ್ವಾ, ಮನೆಯಿಂದ ಹೊರಗಡೆ ಇದ್ದವರಿಗೆ ಮಾತ್ರ ಅದು ಗೊತ್ತಾಗೋದು. ಮಳೆ ತುಂಬಾ ಜೋರಾಯ್ತು ಅಂದ್ರೆ ರಜೆ ಕೊಡ್ತಿದ್ರು ಆಗ ನೋಡ್ಬೇಕು ಮಕ್ಕಳ ಖುಷಿನಾ. ನನ್ ತಮ್ಮ ತಂಗಿ ಎಲ್ಲ ಕುಣ್ದೇಬಿಡ್ತಾ ಇದ್ರು, ಅದನ್ನ ನೋಡಕ್ಕೆ ಒಂತ...

ನಾಲ್ಕು ವರುಷದ ಖುಷಿ

ಜುಲೈ 6, 2021. ಕಂಚೀಪಾಲ್ ಬ್ಲಾಗ್ ಸ್ಪಾಟ್‌ನಲ್ಲಿ ಅಂದು ನಾನು ನನ್ನ ಮೊದಲ ಬರಹ ಪ್ರಕಟಿಸಿದ್ದೆ. ಓದುಗರು ಇಷ್ಟವಾದರೆ ಓದುತ್ತಾರೆ, ಇಲ್ಲವೆ ಪ್ರಯತ್ನ ಜಾರಿಯಲ್ಲಿರಲಿ. ನಾನಂತೂ ಬರಿಲೇಬೇಕು ಎಂದು ನಿರ್ಧಾರ ಮಾಡಿದ್ದೆ. ಆದರೆ ನಿಮ್ಮಿಂದ ನನಗೆ ಸಿಕ್ಕ ಸ್ಪಂದನೆ ಬಹಳ ದೊಡ್ಡದು. ಒಮ್ಮೆ ಓದಿದವರು ಮತ್ತೊಮ್ಮೆ ಓದಿ ಇಷ್ಟವಾದ ಬರಹಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಂಡು ನಾನು ಸಿಕ್ಕಾಗೆಲ್ಲ 'ನೀ ಬರೆದದನ್ನು ಓದಿದೆ, ತುಂಬಾ ಚೆನ್ನಾಗಿತ್ತು. ಹೀಗೆ ಬರಿತಾ ಇರು' ಎಂದು ಪ್ರೋತ್ಸಾಹಿಸಿದವರು ಹಲವರಿದ್ದೀರಿ. ಮನೆ, ಕಾಲೇಜು, ಆಫೀಸ್ ಎಲ್ಲ ಕಡೆಗಳಲ್ಲಿ ಖುಷಿಯಿಂದ ಬರೆದೆ. ಇಂದು ಇದೇ ಅಕ್ಷರಗಳು ನನ್ನ ಬದುಕಿನ ಕೈಹಿಡಿದು ಮುನ್ನಡೆಸುತ್ತಿವೆ. ಮೊದಲ ಉದ್ಯೋಗ ಸಿಕ್ಕಾಗ ಮತ್ತು ನನ್ನ ಮುಂದಿನ ಹೆಜ್ಜೆಗೂ ಇದೇ ಬ್ಲಾಗ್ ಕಾರಣ ಎಂದು ಕೆಲಸ ಕೊಟ್ಟವರೂ ಹೇಳಿದ್ದು ಇನ್ನೊಂದು ಖುಷಿ. ಇಂದಿಗೆ ಈ ಬ್ಲಾಗ್ ಆರಂಭವಾಗಿ 4 ವರ್ಷಗಳು ಸಂದಿವೆ. ಹಲವರು ಸಾಮಾಜಿಕ ಕಾರ್ಯಕ್ರಮ, ಸ್ವ ಉದ್ಯೋಗಗಳಿಗೆ ಸಂಬಂಧಿಸಿದ ಬರಹಗಳನ್ನು ಇದೇ ಬ್ಲಾಗ್ ಮೂಲಕ ಸಂಪರ್ಕಿಸಿ ಬರೆಸಿಕೊಂಡಿದ್ದಾರೆ. ಕೆಲವರಿಗೆ ಉಚಿತವಾಗಿ ಬರೆದುಕೊಟ್ಟರೆ, ಇನ್ನು ಕೆಲವರು ಅವರಾಗೇ ಹಣ ತಲುಪಿಸಿದ್ದೂ ಉಂಟು.  ಈ 4 ವರ್ಷಗಳಲ್ಲಿ ಹತ್ತೊಂಬತ್ತು ಸಾವಿರ ಜನರು ನನ್ನ ಬ್ಲಾಗ್ ಓದಿದ್ದಾರೆ. ಅದರಲ್ಲಿ ನೀವೂ ಒಬ್ಬರು. 21 ಸಾವಿರ ಜನರನ್ನು ಈ ನಾಲ್ಕು ವರ್ಷಗಳಲ್ಲಿ ತಲುಪಬೇಕು ಎಂಬ ಸಂಕಲ್ಪ ಆಗ...