Skip to main content

ಬಾವಲಿಗಳು ಪರಿಸರಕ್ಕೆ ಪೂರಕ



ಅಳಿವಿನಂಚಿನಲ್ಲಿರುವ ಬಾವಲಿಗಳು ಅಪಶಕುನವೆಂದು ನಿರಾಕರಣೆಗೊಳ್ಳುತ್ತವೆ. ಆದರೆ  ಬಾವಲಿಗಳು ಪರಿಸರಕ್ಕೆ ಅತೀ ಅವಶ್ಯಕ. ಸದಾ ಗುಂಪಿನಲ್ಲಿ ವಾಸಿಸುವ  ಬಾವಲಿಗಳು ಗುಹೆ,  ಪಾಳುಬಿದ್ದ ಮನೆ, ಹಳೆಯ ಕೊಟೆ, ಹೀಗೆ ನಿರ್ಜನ ಪ್ರದೇಶದಲ್ಲಿ ವಾಸಿಸುತ್ತವೆ.

ಆದರೆ ಉಜಿರೆಯ ಅಜ್ಜರ ಕಲ್ಲು ಮೈದಾನದ ಸುತ್ತಲಿನ ಪ್ರದೇಶದಲ್ಲಿ ಜನ ಸಂಚಾರ ಹಾಗೂ ವಾಹನಗಳ ಶಬ್ಧಗಳ ನಡುವೆಯು ಪ್ಲೇಯಿಂಗ್ ಪಾಕ್ಸ ಎಂಬ ಪ್ರಬೇಧದ ಬಾವಲಿಗಳು  ವಾಸಿಸುತ್ತಿವೆ. ಸಂಜೆಯಾಗುತ್ತಿದ್ದಂತೆ ಆಹಾರ ಹುಡುಕಾಟಕ್ಕೆ ತೆರಳುವ ಈ ನಿಶಾಚರಿ ಬಾವಲಿಗಳು ರಾತ್ರಿ ತಮ್ಮ ಕಾರ್ಯಮುಗಿಸಿ ಬೆಳಕು ಹರಿಯುವ ಮುನ್ನ  ತಮ್ಮ ವಾಸಸ್ಥಾನಕ್ಕೆ ಮರಳುತ್ತವೆ.



ಈ ದೊಡ್ಡ ಬಾವಲಿಗಳು ಹಣ್ಣು ಹಾಗೂ ಹೂವಲ್ಲಿನ ಮಕರಂದ ಹೀರಿ ಜೀವಿಸುತ್ತವೆ. ದೊಡ್ಡ ಬಾವಲಿಗಳು 40 ರಿಂದ 150 ಗ್ರಾಂ ತೂಕವಿದ್ದು, ಒಂದೇ ಹಾರುತ್ತಿರುವಾಗ ಹದ್ದಿನಂತೆ ಕಾಣುತ್ತದೆ.ಕಕತ್ತಲಾಗುತ್ತಿದ್ದಂತೆ ಐದು ನಿಮಿಷ ಆಕಾಶದ ಕಡೆ ಮುಖಮಾಡಿದರೆ ಸಾಕು, ಆಹಾರ ಅರಸಿ ಹೋಗುವ ಬಾವಲಿಗಳ ಹಿಂಡು ಕಾಣುತ್ತದೆ. ಪಕ್ಷಿಗಳಂತೆ ಸ್ವತಂತ್ರವಾಗಿ ಹಾರಾಡುವ ಸಾಮರ್ಥ್ಯವುಳ್ಳ ಏಕೈಕ ಸಸ್ತನಿ ಎಂದರೆ ಅದು ಬಾವಲಿಮಾತ್ರ.


ಶಬ್ದ ತರಂಗಗಳ ಮೂಲಕ ಧ್ವನಿ ಗ್ರಹಿಸುವ ವಿಶೇಷ ಸಾಮರ್ಥ್ಯವನ್ನು ಬಾವಲಿಗಳು ಹೊಂದಿವೆ. ಬಾವಲಿಗಳಲ್ಲಿ ಇತರ ಪ್ರಾಣಿಗಳಂತೆ ಗಡಿ ಸಮಸ್ಯೆಯೂ ಇರುತ್ತದೆ, ಇದಕ್ಕಾಗಿ ಕೆಲ ಸಂಧರ್ಭದಲ್ಲಿ ಇವುಗಳ ನಡುವೆ ಕಾದಾಟ ನಡೆಯುತ್ತದೆ.

ಬಾವಲಿಗಳ ಸಂತತಿ ಅವನತಿಯತ್ತ ಸಾಗುತ್ತಿದ್ದು ಅವುಗಳ ರಕ್ಷಣೆ ಮಾಡುವ ಹೊಣೆಗಾರಿಕೆ ನಮ್ಮದಾಗಿದೆ.‌ ಇವುಗಳ ಕುರಿತಾದ ಅಧ್ಯಯನದ ಅವಶ್ಯಕತೆಯೂ ಇದೆ. ಇಲ್ಲವಾದಲ್ಲಿ ನಮ್ಮ ಗಮನಕ್ಕೆ ಬಾರದಂತೆ ಪರಿಸರದಲ್ಲಿ ಏರುಪೇರಾಗುವುದು ಖಂಡಿತ.

ಪರಿಸರ ಬೆಳೆಸುವಲ್ಲಿ ಬೀಜಪ್ರಸರಣ ಮಾಡುವಲ್ಲಿ ಬಾವಲಿಗಳ ಪಾತ್ರ ಬಹಳ ಮುಖ್ಯ. ಆಹಾರವಾಗಿ ತಿಂದ ಹಣ್ಣುಗಳ ಬೀಜವನ್ನು ತಮ್ಮ ಹಿಕ್ಕೆಯ ಮೂಲಕ ಬಾವಲಿಗಳು ಪ್ರಸರಣ ಮಾಡುತ್ತವೆ. ರಾತ್ರಿಹೊತ್ತು ಅರಳುವ ಎಷ್ಟೋ ಹೂವುಗಳ ಪರಾಗಸ್ಪರ್ಶ ಮಾಡುತ್ತವೆ. ಮತ್ತು ಗಂಟೆಗೆ ಸಾವಿರಕ್ಕೂ ಅಧಿಕ ಕೀಟಗಳನ್ನು ಇವು ತಿನ್ನುತ್ತವೆ. ಇವುಗಳ ಗೊಬ್ಬರಕ್ಕೆ ದೇಶ - ವಿದೇಶಗಳಲ್ಲಿ ಭಾರಿ ಬೇಡಿಕೆ ಇದೆ.

-ಮನೋಜ್ ಗೊಡಬೊಲೆ
ಸಹಾಯಕ ಪ್ರಾಧ್ಯಾಪಕರು ಜೈವಿಕ ತಂತ್ರಜ್ಞಾನ ವಿಭಾಗ

ಸುಮಾ.ಕಂಚೀಪಾಲ್



Comments

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...