Skip to main content

ಆಟಿ

ಆಟಿ

ತುಳುನಾಡಿನ ಸಂಸ್ಕೃತಿಯ ಪರಿಚಯ ಮಾಡಿಸುವುದಕ್ಕಾಗಿ ಮತ್ತು ಹಬ್ಬದ ಆಚರಣೆ ಖುಷಿಯನ್ನು, ಊಟದ ರುಚಿಯನ್ನೂ ಅರಿಯುವುದಕ್ಕಾಗಿ ಈ ಆಟಿ  ಹಬ್ಬವನ್ನು
ಎಸ್.ಡಿ. ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಲಾಗಿತ್ತು.

ಹುಡುಗ ಹುಡುಗಿಯರೆಲ್ಲ ಸಾಂಪ್ರದಾಯಿಕ ಉಡುಗೆ ತೊಟ್ಟು,
ಹೆಣ್ಣು ಮಕ್ಕಳೆಲ್ಲ ಸೀರೆ, ಹುಡುಗರು ಪಂಚೆ ಉಟ್ಟು ರತ್ನಮಾನಸ ಎಂಬ ವಸತಿನಿಲಯದಲ್ಲಿ ಹಾಜರಿದ್ದರು.‌ ಕಣ್ಣಿಗಂತು ಹಬ್ಬ ಚಂದ ಚಂದದ ಬಣ್ಣ, ಬಣ್ಣದ ಲೋಕ ಅಲ್ಲಿ ಸೃಷ್ಟಿಯಾಗಿತ್ತು.
ತೀರಾ ಸಾಂಪ್ರದಾಯಿಕ ಎನಿಸುವ ಹಳೆಯ ಕಾಲದ ಕಟ್ಟಡ, ಅಲ್ಲಿದ್ದ ಮರದ ವಸ್ತುಗಳು, ಹೊರಜಗುಲಿ, ಪಾಠಶಾಲೆ, ಒಳಾಂಗಣ ವಿನ್ಯಾಸ ಎಲ್ಲವೂ ಗುತ್ತು ಮನೆಯ ಶೈಲಿಯಲ್ಲಿತ್ತು. ನನಗೆ ಇದು ಹೊಸತರ ಎನಿಸಿತ್ತು.

 ರತ್ನಮಾನಸ ಬಾಳೆಲೆ ಊಟ

ಮನೆಯ ಮೆತ್ತು ಹತ್ತಿದಂತೆ ಮೇಲ್ಗಡೆ ಮೆಟ್ಟಿಲೇರಿ ಹೋದಾಗ ಅಲ್ಲಿ ಪುಟ್ಟದೊಂದು ವೇದಿಕೆ ಸಿದ್ಧವಾಗಿತ್ತು. ಅಲ್ಲಿ ಕಹಿ ಔಷದಿಯ ಹಾಲೆ ಮರದ ಚಕ್ಕೆಯ ಕಷಾಯ ಮಾಡುವ ವಿಧಾನದ ಬಗ್ಗೆ ಮತ್ತು ಈ ಆಟಿ ಮಾಸದಲ್ಲಿ ಹೊಸ ಪೈರು ಇಲ್ಲದೆ ಹಳೆ ಪೈರುಗಳು ಸಹ ಖಾಲಿಯಾಗಿ ಮನೆಯವರು ಮಳೆಗಾಲದಲ್ಲಿ ಕಂಗಾಲಾಗುವ ದಿನದ ಕಥನವಿತ್ತು.ಅದರಲ್ಲಿ ಕುತೂಹಲಕಾರಿಯಾದ ವಿಷಯವೆಂದರೆ  ಮನೆಯ ಗಂಡಸರೊಬ್ಬರು ಮರದ ಹತ್ತಿರ ಹಿಂದಿನ ದಿನ ಹೋಗಿ ನಾಳೆ ಬರುತ್ತೇನೆ ನಿನ್ನಲ್ಲಿಯ ಔಷದೀಯ ಗುಣಗಳು ಹೆಚ್ಚಿರಲಿ ಎಂದು ಬೇಡಿಕೆ ಸಲ್ಲಿಸಿ ಬರುವುದು. ಬಂದು ಮರುದಿನ ಬೆತ್ತಲಾಗಿ ಹೋಗಿ ಯಾವುದೇ ಲೋಹದ ತುಂಡನ್ನೂ ಬಳಸದೇ ಚಕ್ಕೆ ಕಿತ್ತು ತರುವ ವಿಚಾರ. ಇಂದಿನ ದಿನಗಳಲ್ಲಿ ಯಾರಾದರು ಹೀಗೆ ಮಾಡಿದರೆ ಹುಚ್ಚರೆಂದಾರು ಎಂದು ನನಗೆ ಅನಿಸಿತ್ತು.
ಹೊರಾಂಗಣ ನೋಟ

ನಂತರ ಈ ಪದ್ದತಿಯ ಹಿಂದೆ ಕಾರಣ ಏನಿರಬಹುದು ಎಂಬ ಪ್ರಶ್ನೆಗೆ ಉತ್ತರ ಹುಡುಕುವ ತವಕ ಆರಂಭವಾಯ್ತು. ( ಆದರೆ ಇನ್ನೂ ಉತ್ತರ ಸಿಕ್ಕಿಲ್ಲ)

ಇಷ್ಟೆಲ್ಲ ಆದ ಮೇಲೆ ಹಾಡು ನೃತ್ಯ ನಾಟಕ ಇತ್ಯಾದಿ.

 ಅದಾದಮೇಲೆ ಭರ್ಜರಿ ಭೋಜನ ಎಲೆಯ ತುಂಬ ಎಡೆ ಶೃಂಗಾರ ಅನ್ನಕ್ಕಲ್ಲಿ ಜಾಗವೇ ಇಲ್ಲ‌. ಕೆಸುವಿನ ಸೊಪ್ಪು,
 ಹಲಸಿನಕಾಯಿ ಇದೆರಡನ್ನೇ ಉಪಯೋಗಿಸಿ ಹಲವು ರೀತಿಯ ಖಾದ್ಯಗಳನ್ನು ತಯಾರಿಸಿದ್ದರು. 
ಎಡೆ ಶೃಂಗಾರ

ಒಂದಕ್ಕಿಂತ ಒಂದು ವಿಭಿನ್ನ. ಹಾಸ್ಟೆಲ್ ಗೆ ಬಂದಮೇಲೆ ನೆಲಕ್ಕೆ ಕೂತು ಊಟಮಾಡದೆ ತಿಂಗಳೇ ಕಳೆದಿತ್ತು ಈ ಹೆಸರಿನಲ್ಲಿ ನೆಲಕ್ಕೆ ಕೂತು ಉಣ್ಣುವ ಭಾಗ್ಯ ದೊರಕಿತ್ತು. ಊಟಮಾಡುವಾಗ ಗೌಜಿ, ಹರಟೆ, ಬಿಡಿಯ


ಊಟ ಮುಗಿದ ಮೇಲೆ ಒಂದು ಅಲ್ಪವಿರಾಮ‌. ಆಗ ಆಟಿ ಗಮ್ಮತ್ತು ನೆನಪಿನ ಹಾಳೆಯಲ್ಲಿ ಮುದ್ರೆಯೊತ್ತಲು ಬೇಕಾದ ಚಂದ ಚಂದದ ಪಟಗಳು. ಕ್ಯಾಮರಾ ಕಣ್ಣಲ್ಲಿ ಸೆರೆ ಹಿಡಿದದ್ದೆ ಹಿಡಿದದ್ದು ಒಬ್ಬರದ್ದೆ ಹತ್ತಾರು ಪೋಟೋ ಒತ್ತಿದ್ದೇ ಒತ್ತಿದ್ದು. ಕರಿ ಕೂಲಿಂಗ್ ಗ್ಲಾಸ್, ಬಿಳಿ ಅಂಗಿ, ಹಳೇಸೀರೆ, ಹೊಸ ಹುಡ್ಗಿ, ಹ್ಯಾಂಡ್ಸಂ ಹುಡುಗ, ಚೂರು ನಡುಕಾಣಲೇ ಬೇಕೆಂದು ಸರಿಸಿಕೊಳ್ಳುವ ನೆರಿಗೆಗಳು, ಅಯ್ಯೊ ಪಂಚೆ ಹಾರ್ತಿದೆ ಅಂತ ನಾಚುವ ಹೊಸಕಾಲದ ಹುಡುಗರು. ಅಂತೂ ಮಜವಿತ್ತು.



ಅದಾದ ನಂತರ ಸೀರೆ ಪಂಚೆಯ ಬದಿಗಿಟ್ಟು ಪ್ಯಾಂಟ್ ಶರ್ಟತೊಟ್ಟು ಕೆಸರುಗದ್ದೆಗಿಳಿದು ಹಗ್ಗ ಜಗ್ಗಾಟ, ನಮ್ಮನಮ್ಮಲ್ಲೇ ಭಲ ಪ್ರದರ್ಶನ, ಕೆಸರುಗದ್ದೆ ಓಟ, ಹಾಡಿಗೆ ನೃತ್ಯ. ನಾನು ಸುಮಾರು ಹೊತ್ತು ಗದ್ದೆಗಿಳಿಯದೆ ದಡದಲ್ಲೆ ನಿಂತೆ ಆದರೆ ಕೊನೆಗೊಂದು ಸಂಚಿನಲ್ಲಿ ನನನ್ನು ಕೆಸರಿಗೆ ನೂಕಲಾಯ್ತು‌. ಜೊತೆಗಿದ್ದ ನನ್ನ ಗೆಳತಿಯನ್ನು. 
ನನ್ನಷ್ಟೇ ತೆಳ್ಳಗಿನ ಹುಡುಗಿಯೊಬ್ಬಳನ್ನು ಎರಡೇ ಕೈಯಲ್ಲಿ ಎತ್ತಿ ಕೆಸರಿನಲ್ಲಿ ಪದೆ ಪದೆ ಮುಳುಗಿಸಿ ಗೋಳು ಕೊಡುತ್ತಿದ್ದ ಜನರನ್ನು ನೋಡಿ ಭಯವಾಗಿ ನಾನು ಇಳಿದಿರಲಿಲ್ಲ.
ಕೊನೆಗೂ ಮೈ ಕೆಸರಾಯ್ತು ಆಗ ಬೇರೆತರದ ಖುಷಿ ಪ್ರಾಪ್ತವಾಯ್ತು.
ಮರುದಿನದ ಕಥೆ ಬೇರೆ ಇದೆ
ಸ್ನಾನದ ಪಜೀತಿ
ಕಾಲು ನೋವು
ಗೀರು ಗಾಯ
ನಿದ್ದೆಗಣ್ಣು
ತ್ರಾಣ ಕಳೆದ ದೇಹ
ತರಗತಿ
ಕಣ್ಣು, ಕಿವಿಯೊಳಗಿನ ಮಣ್ಣು
ಅಬ್ಬಬ್ಬಾ!

ಮತ್ತೆ ಹೇಳ್ತೇನೆ ಈ ಕುರಿತು.

ಸುಮಾ.ಕಂಚೀಪಾಲ್

Comments

Post a Comment

Popular posts from this blog

ದೀಪಾವಳಿ - ತವರಲ್ಲಿ ದೊಡ್ಡಬ್ಬ

ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ  ಬ್ಲಾಗ್‌ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...

ಒಂದು ಬಸ್ಸಿನ‌ ಪುರಾಣ ಕಥನ

ಶೃಂಗೇರಿ ಬಸ್ ನಿಲ್ದಾಣ, ಸಮಯ ರಾತ್ರಿ 12:07. ಬ್ಲಾಗ್ ಬರಯಬೇಕು ಎಂದೆನಿಸಿ ಬರೆಯುತ್ತಿದ್ದೇನೆ. ಯಾವುದೋ ಒಂದು ಇದುವರೆಗೆ ಹೆಸರೂ ಕೇಳಿರದ ಬಸ್ ಬುಕ್ ಮಾಡಿ ಶೃಂಗೇರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ನಿರ್ಧಾರ ಮಾಡಿದ್ದೆವು. ಇದಕ್ಕೆ ಮುಖ್ಯ ಕಾರಣ ಏನೆಂದರೆ ನಾವು ಪೂರ್ವ ನಿರ್ಧಾರಿತವಾಗಿ ಅಮ್ಮನವರ ದೇವಸ್ಥಾನಕ್ಕೆ ಬಂದವರಲ್ಲ. ಏನೋ ಪ್ರೇರಣೆಯಾಯಿತು, ಹಿಂದೆ ಮುಂದೆ ಯೋಚಿಸದೆ ಹೊರಟಿದ್ದೆವು. ಎಲ್ಲವೂ ಸೌಖ್ಯವಾಗಿ, ಶಾರದೆಯ ದರ್ಶನ ಮಾಡಿ, ಗುರುಗಳ ಪಾದಪೂಜೆ ಮಾಡುವ ಭಾಗ್ಯ ಸಿಕ್ಕಿ, ಕಿಗ್ಗಾ ದೇವಸ್ಥಾನ ಹಾಗೂ ಸಿರಿಮನೆ ಜಲಪಾತವನ್ನೂ ನೋಡಿ ಈ ದಿನ ಸಾಂಗವಾಯ್ತು ಎಂದು ಕಥೆ ಹೇಳುತ್ತಿರುವ ಹೊತ್ತಿಗೆ ಬಸ್ ಕೈಕೊಟ್ಟುಬಿಟ್ಟಿದೆ.  9:40ಕ್ಕೆ ಬರಬೇಕಿದ್ದ ಬಸ್ ಈಗ ಹನ್ನೆರಡು ಚಿಲ್ಲರೆ ಗಂಟೆಯಾದರೂ ಪತ್ತೆ ಇಲ್ಲ. ನಮ್ಮಂತೆಯೇ ಇದೇ ಬಸ್ಸಿಗೆ ಕಾದ ಹತ್ತಾರು ಜನರು ಇಲ್ಲೇ ಕುಳಿತಿದ್ದಾರೆ. ನಾಯಿಗಳು ಹಾಯಾಗಿ ನಿದ್ರೆ ಮಾಡುತ್ತಿದ್ದವು, ಒಂದಷ್ಟು ಹಸುಗಳೂ ಮೆಲುಕು ಹಾಕುತ್ತ ಮಲಗಿದ್ದವು. ಆದರೆ ನಮ್ಮೆಲ್ಲರ ಮನಸಿನಲ್ಲಿ ಊರು ಸೇರುವುದು ಹೇಗೆ ಎಂಬ ಪ್ರಶ್ನೆ ಅಲೆದಾಡುತ್ತಿತ್ತು. 10:30ರವರೆಗೆ ಎಲ್ಲರೂ ಶಾಂತ ರೀತಿಯಲ್ಲಿ ಕಾದರು. ಆ ನಂತರ ಎಲ್ಲರಿಗೂ ಮಾರನೆ ದಿನದ ಕೆಲಸಗಳು ನೆನಪಾಗತೊಡಗಿದವು. ನನ್ನೊಬ್ಬಳನ್ನು ಬಿಟ್ಟು ಉಳಿದವರೆಲ್ಲರಿಗೂ ನಾಳೆ ರಜೆ. ಕಾರಣ, ಭಾನುವಾರ. ನನಗೆ ವೀಕಾಪ್ ಭಾನುವಾರಕ್ಕಿರಲಿಲ್ಲ. ನನಗೆ ಇವರೆಲ್ಲರಿಗಿಂತ ...

ಕೊಡೆ ಕೊಂಡು ಹೋದರೆ ಬಾರದ ಮಳೆ

ಹಾಯ್ ಎಲ್ಲ ಅರಾಮಾ? ಮಳೆ ಬಂದ್ರೆ ಸಾಕು, ಒಂದರ ಹಿಂದೆ ಒಂದು ಕಥೆ ಸಹಸ್ರಪದಿಯಂತೆ ಹರಿದುಬರುತ್ತೆ. ಮಳೆಗಾಲದಲ್ಲಿ ನಾನು ಬರೆಯುವ ಬ್ಲಾಗ್ ಸಂಖ್ಯೆ ಹೆಚ್ಚಾಗಬಹುದು. ಗುಡುಗು, ಮಿಂಚು ಮತ್ತು ಮಳೆ ಸದ್ದಿಗೆ ಏನಾದರೂ ಬರೀಬೇಕು ಅನ್ನೋ ಹಂಬಲ ಹೆಚ್ಚು. ಇವತ್ತು ನಾನು ಬೆಂಗಳೂರ್ ಮಳೆ ಮತ್ತೆ, ನಮ್ಮೂರ್ ಮಳೆ ಬಗ್ಗೆ ಬರೀತಾ ಇದ್ದೀನಿ. ಈ ಟಾಪಿಕ್ ಓಕೆನಾ?  ಓಕೆನೆ ಬಿಡಿ, ಸುಮಾ ಬ್ಲಾಗ್ ಬರ್ಯೋದೆ ಅಪರೂಪ ಆಗಿರೋವಾಗ ನೀವ್ ಓದದೆ ಇರಲ್ಲ ಅನ್ನೋ ಭರವಸೆಲೇ ಬರೀತೀನಿ. ಬೆಂಗಳೂರಲ್ಲಿ ಮಳೆ ಬಂದ್ರೆ ನೀರು ಇಂಗೋಕೆ ಜಾಗ ಇಲ್ದೆ ಕೆಲವು ಕಡೆ ಅವಾಂತರ ಆಗೋದು ನಿಜ. ಆದ್ರೆ, ಊರಲ್ಲಿ ಹಾಗಲ್ಲ ನೋಡಿ. ಅಲ್ಲಿ ಸಿಮೆಂಟ್ ರೋಡಿಗಿಂತ ಮಣ್ಣು ರಸ್ತೆಯೇ ಜಾಸ್ತಿ. ನೀರು ಇಂಗುತ್ತೆ. ಸಾಧಾರಣ ಮಳೆ ಬಂದ್ರೆ ಇಬ್ಬನಿ ಬಿದ್ದ ಹಾಗಿರುತ್ತೆ. ಆದ್ರೆ ಬೆಂಗಳೂರಲ್ಲಿ ಸಾಧಾರಣ ಮಳೆ ಬಂದ್ರೂ ಪ್ರವಾಹವೇ ಉಕ್ಕಿ ಬರೋದು. ನಿನ್ನೆ ಆಫೀಸಿಗೆ ಬರೋಕ್ ಆಗ್ದೆ ಇದ್ರೆ ಮನೆಯಿಂದಲೇ ಕೆಲಸ ಮಾಡಿ ಅಂತ 'Work From Home' ಕೊಟ್ಟಿದ್ರು. ಯಾಕಂದ್ರೆ, ಮಳೆ ಬಂದು ಅಲ್ಲಲ್ಲಿ ಮರ ಬಿದ್ದು, ನೀರ್ ತುಂಬಿ ಟ್ರಾಫಿಕ್ ಹೆಚ್ಚಾಗಿತ್ತು. ಆದ್ರೆ ಆಫೀಸಿಗೆ ನಾನ್ ಹೋಗಿದ್ದೆ. ಬೆಂಗಳೂರಿಗೆ ಕೆಲಸಕ್ಕೆ ಅಂತಲೇ ಬಂದಿರೋ ನನ್ ತರದೋರೆಲ್ಲ ಅವತ್ತು ನಗ್ತಾ ಇದ್ರು. "ಇದೂ ಒಂದ್ ಮಳೆನಾ? ಮಳೆ ಅಂದ್ರೆ ನಮ್ಮೂರಲ್ ಬರತ್ತಲ್ಲ, ಅದು" ಅಷ್ಟಂದಿದ್ದೇ ತಡ ಹಳ್ಳಿಯಿಂದ ಬಂದಿದ್ದ ಜನ ಎಲ್ಲ ಸೇರಿ ಒ...