ನನ್ನ ಹೆಸರು ಇಷ್ಟೊಂದು ಪ್ರತಿಷ್ಠಿತ ಪ್ರಶಸ್ತಿಯ ಅಡಿಯಲ್ಲಿ ಕಾಣಿಸಿಕೊಳ್ಳಬೇಕು ಎಂಬ ಆಸೆಯಂತೂ ನನಗಿತ್ತು, ಆದರೆ ಅದು ಸಾಧ್ಯವಾಗಬಹುದೇ ಎಂಬ ಅನುಮಾನವೂ ಇತ್ತು. ಈ ವರ್ಷ ನನಗೆ ಸಿಕ್ಕ ಅತಿ ದೊಡ್ಡ ಖುಷಿಯಲ್ಲಿ ಇದು ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ನನ್ನ ಬರವಣಿಗೆ ಮೆಚ್ಚಿ ಪ್ರೋತ್ಸಾಹಿಸಿದ ಎಲ್ಲರಿಗೂ ನಾನಿದನ್ನು ಅರ್ಪಿಸುವೆ. ನಾನು ಬರೆದದ್ದಕ್ಕಲ್ಲ ಈ ಪ್ರಶಸ್ತಿ ಬರಬಹುದಾ? ಎಂದು ಅನುಮಾನಿಸಿದಾಗ ಒತ್ತಾಯ ಮಾಡಿ "ಇದು ತಮಾಷೆ ಅಲ್ಲ, ಮೊದಲು ಇದನ್ನು ಸೀರಿಯಸ್ಆಗಿ ಆಲೋಚಿಸಿ ಈ ಬಗ್ಗೆ ಮುಂದೇನು ಮಾಡಬೇಕು ಯೋಚಿಸು, ಧ್ಯಾನದಂತೆ ಬರಿ" ಎಂದು ನನಗೆ ಗುರಿ ತೋರಿಸಿ. ಬರೆಯಲು ಕುಳಿತಾಗ ಯಾವ ಕೆಲಸವಿದ್ದರೂ ತಾನೇ ಮಾಡಿಕೊಂಡು, ಬಾಯಲ್ಲಷ್ಟೇ ಅಲ್ಲ ಕೃತಿಯಲ್ಲೂ ನನಗೆ ಪ್ರೋತ್ಸಾಹಿಸುವ ನೀನಿರುವಾಗ ನಾನು ಇನ್ನಷ್ಟು ಸಾಧಿಸಬಲ್ಲೆನು.ಇವಳೇಕೆ ವಿನ್ನಿಂಗ್ ಸ್ಪೀಚ್ ಕೊಡುತ್ತಿದ್ದಾಳೆ ಎಂದುಕೊಂಡವರಿಗೆ ಇದಕ್ಕಿಂತ ದೊಡ್ಡ ಗೆಲುವು ಇನ್ನೊಂದಿಲ್ಲ ಎಂದು ಹೇಳಲು ಬಯಸುವೆ.
ಹಾಯ್! ನಿಮ್ಮನ್ನೆಲ್ಲ ಮಾತಾಡಿಸದೆ ಹಲವು ದಿನಗಳೇ ಕಳೆದಿವೆ. ಪರಿಸ್ಥಿತಿ ಕೈಗೂಡಿಬರದ ಕಾರಣ ಹಲವರಲ್ಲಿ ಕ್ಷಮೆ ಕೋರುತ್ತಾ ಮತ್ತೆ ಬರೆಯುತ್ತಿರುವೆ. ಮುಖ್ಯವಾಗಿ ಇದು ಸುಜಾತಕ್ಕನಿಗಾಗಿಯೇ ಪೋಸ್ಟ್ ಮಾಡುತ್ತಿರುವ ಬರಹ. ದೂರದ ಅಮೇರಿಕಾದಲ್ಲಿದ್ದುಕೊಂಡು ತವರಿನ ನೆನಪಲ್ಲೇ ದಿನ ಕಳೆಯುವ ಅವಳು, ನನ್ನನ್ನು ಹಬ್ಬಕ್ಕೆ ಕರೆಯಲು ಬಂದ ತವರ ಬಳಗದ ಫೋಟೋ ನೋಡಿಯೇ ಭಾವುಕಳಾಗಿ ಬ್ಲಾಗ್ ಬರಿ ಎಂದಿದ್ದಳು. ಆಗಾಗ ಮೆಸೇಜ್ ಮಾಡಿಯೂ ಕೇಳುತ್ತಿದ್ದಳು. ಆದರೆ, ನಾನು ಅಸಹಾಯಕಳಾಗಿದ್ದೆ. ಬರೆಯುವ ಮನಸಿದ್ದರೂ, ಬರೆಯಲು ಸಾಧ್ಯವಾಗಿರಲಿಲ್ಲ. ಇದಿಗ ಈ ಹಿಂದೆ ಬರೆದಿಟ್ಟಿದ್ದ ಬ್ಲಾಗ್ನ ಅರ್ಧವನ್ನು ಮತ್ತೆ ಮುಂದುವರಿಸಿ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದೇನೆ. ಓದಿ... ದೀಪಾವಳಿ ಎಂದರೆ ಉತ್ತರ ಕನ್ನಡ ಭಾಗದಲ್ಲಿ ಯಾವಾಗಲೂ ಒಂದು ದೊಡ್ಡ ಹಬ್ಬ. ನವರಾತ್ರಿ, ಚೌತಿ, ನಾಗರಪಂಚಮಿ, ಯುಗಾದಿ ಹೀಗೆ ಹತ್ತಾರು ಹಬ್ಬಗಳಿದ್ದರೂ ದೊಡ್ಡ ಹಬ್ಬ ಎಂದು ಕರೆಯುವುದು ಮಾತ್ರ ದೀಪಾವಳಿಯನ್ನು. ಅದರಲ್ಲೂ ಹೊಸದಾಗಿ ಮನೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದರೆ ಆ ವರ್ಷ ಇನ್ನೂ ದೊಡ್ಡ ಹಬ್ಬ. ಅಳಿಯ ಹಾಗೂ ಮಗಳನ್ನು ಕರೆದು ಅಭ್ಯಂಜನ ಸ್ನಾನ ಮಾಡಿಸಿ, ಅವರಿಗೆ ಹೊಸ ಬಟ್ಟೆ ಹಾಗೂ ಶಕ್ತ್ಯಾನುಸಾರ ಉಡುಗೊರೆ ಕೊಟ್ಟು ಹಬ್ಬ ಮಾಡುತ್ತಾರೆ. ಈ ವರ್ಷ ನನಗೆ ಇದು ಹೊಸ ಹಬ್ಬವಾಗಿತ್ತು. ಹಾಗಾಗಿ ನಮ್ಮ ಮನೆಯಲ್ಲಿ ಹಬ್ಬ ಜೋರಾಗಿಯೇ ಇತ್ತು. ಇದು ಎಷ್ಟು ಹೊಸ ಹಬ್ಬ ಎಂದರೆ... ಎಲ್ಲಾದರೂ ಹೋದಾಗ ಯ...
Comments
Post a Comment