Skip to main content

Posts

Showing posts from October, 2025

ಬೂದೆ ಕಳು ಹಬ್ಬ

ದೀಪಾವಳಿಯಲ್ಲಿ 'ಬೂದೆ ಕಳು' ಎಂಬ ಹಬ್ಬ ಬರುತ್ತದೆ. ಈ ಹಬ್ಬ ಇತ್ತೀಚಿನ ದಿನಗಳಲ್ಲಿ ಆಚರಣೆಯಲ್ಲಿ ಇಲ್ಲವಾದರೂ ಹಿಂದೆಲ್ಲ ಈ ಹಬ್ಬವನ್ನು ಅದ್ಧೂರಿಯಾಗಿಯೇ ಆಚರಿಸುತ್ತಿದ್ದರು ಎನ್ನುವುದಕ್ಕೆ ನಾನೇ ಸಾಕ್ಷಿ. ನಾನು ತುಂಬಾ ಚಿಕ್ಕವಳಿದ್ದಾಗ ನನ್ನ ಅಜ್ಜಿ ಮನೆಯಲ್ಲಿ ನಾನು ಈ ಹಬ್ಬದ ಆಚರಣೆಯ ಬಗ್ಗೆ ತಿಳಿದುಕೊಂಡೆ. ಇನ್ನು ನಮ್ಮ ಮನೆಯಲ್ಲಿ ಈ ರೀತಿ ಹಬ್ಬದ ಆಚರಣೆಯ ಬಗ್ಗೆ ನಾನು ವಿವರಣೆಯನ್ನು ಮಾತ್ರ ಕೇಳಿದ್ದೆ.  ಆದರೆ ಇದನ್ನು ಕಣ್ಣಾರೆ ಕಂಡು ಭಾಗಿಯಾಗಿದ್ದು ಮಾತ್ರ ಅಜ್ಜನ ಮನೆಯಲ್ಲಿ. ಅಜ್ಜನ ಮನೆಯೆಂದರೆ ಅದೊಂದು ದ್ವೀಪ. ಸುತ್ತಲೂ ನೀರು, ನಡುವೆ ನನ್ನ ಅಜ್ಜನ ಮನೆ. 'ಅಮ್ಮ' ಎಂಬ ಬಳ್ಳಿಯ ಬೇರು ಊರಿಕೊಂಡಿದ್ದ ಜಾಗ ಅದು. ಅಲ್ಲಿ ಹೋದಾಗಲೆಲ್ಲ ತುಂಬಿ ಗಲಗುಡುವ ಮನೆ. ಹತ್ತಾರು ಜನರು ಒಟ್ಟಿಗೆ ಕೂಡಿ ಬಾಳುತ್ತಿದ್ದ ಮನೆ ದಬ್ಬೇಸಾಲು. ಮರುದಿನವಾದರೆ ಲಕ್ಷ್ಮೀ ಪೂಜೆ. ಹಿಂದಿನ ದಿನವೇ ಈ ಬೂದೆ ಕಳು ಹಬ್ಬ. ಯಾರಿಗೂ ನಷ್ಟವಾಗದಂತೆ ಚಿಕ್ಕ ಪುಟ್ಟ ವಸ್ತುಗಳನ್ನು ಮಾತ್ರ ಕದಿಯುವ ಹಬ್ಬ. ಈ ಕಳು ಮಾಡುವ ಹಬ್ಬ ಯಾಕೆ ಆಚರಣೆಯಲ್ಲಿ ಬಂತು? ಅದರ ಹಿಂದಿನ ಇತಿಹಾಸ ಮತ್ತು ಆಚರಣೆಗೆ ಕಾರಣ ಏನು ಎಂಬುದು ನನಗೆ ತಿಳಿದಿಲ್ಲ. ನಿಮಗೇನಾದರೂ ತಿಳಿದಿದ್ದರೆ ನೀವು ವಿವರಿಸಬಹುದು. ದಬ್ಬೇಸಾಲು ಊರಿನಲ್ಲಿ ಹಳ್ಳಗಳನ್ನು ದಾಟುತ್ತಲೇ ಒಂದೊಂದು ಮನೆ ತಲುಪಬೇಕು. ಹೀಗಿರುವಾಗ ನಾನು ತುಂಬಾ ಚಿಕ್ಕವಳು, ಒಂದೆರಡನೇ ತರಗತಿ ...

ಹಳೆ ಲೇಖನಕ್ಕೆ ಪ್ರಕಟಣೆಯ ಭಾಗ್ಯ!

ಅಷ್ಟಕ್ಕೂ ನಾವು ಮದುವೆ ಆಗಿದ್ದೇ ಬರೋಬ್ಬರಿ ಚುನಾವಣೆಯ ಕಾಲಗತಿಯಲ್ಲಿ.  ನಾವು ಅಂದರೆ ಮತ್ಯಾರೂ ಅಲ್ಲ, ನಾನು ಮತ್ತು ಸುಮಾ.  ಇಬ್ಬರೂ ಮಾಧ್ಯಮದಲ್ಲಿ, ಹೇಳಿಕೇಳಿ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವುದು ಮತದಾನ ಮುಗಿದರೂ ನಾಕು ದಿನ ರಜೆ ಹಾಕಲು ಅನುವು ಮಾಡಿರಲಿಲ್ಲ. ಚುನಾವಣೆ ಮುಗಿದು, ಸರ್ಕಾರ- ಮಂತ್ರಿ ಮಂಡಲ ರಚನೆಯೂ ಆಗಿಹೋದ ಮೇಲಾದರೂ ಒಂದು ಕೈ ನೋಡೇಬಿಡೋಣ ಎಂದು ಹೊರಟೆವು. ನಮಗೆ ಬೇಕಿದ್ದು, ಅದಾಗೇ ಕೂಡಿಬಂದದ್ದು ಎಲ್ಲವೂ ಸೇರಿ ಒಂದು ರಾತ್ರಿ ಕಳೆದು ಬೆಳಗು ಕೂಗುವದರಲ್ಲಿ ಒಂದು ಮುತ್ತಿನ ನಗರಿ!  ನಮ್ಮ ಸಮಯಕ್ಕೆ ರೈಲು, ರೈಲಿನ ಸಮಯಕ್ಕೆ ನಾವು ಸೆಟ್ ಆಗುವುದಿಲ್ಲ ಎಂದು ಅಳೆದು ತೂಗಿ ಕೊನೆಕ್ಷಣದಲ್ಲಿ ಬಸ್ ಮೆಟ್ಟಿಲು ಹತ್ತುವ ನಿರ್ಧಾರ ಮಾಡಿದ್ದಾಯಿತು. ಮೊದಲು ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆ ಟಿಎಸ್ಆರ್‌ಟಿಸಿ ಬಸ್‌ ಪರಿಶೀಲಿಸಲಾಗಿ ಬಸ್‌ಗಳ ಚಿತ್ರಗಳೇ ನಮ್ಮನ್ನು ಭ್ರಮನಿರಸನ ಮಾಡಿದ್ದು ಸುಳ್ಳಲ್ಲ. ತೆಲಂಗಾಣದ ಲಹರಿ ಹೆಸರಿನ ಬಸ್‌ಗಳು ನಮ್ಮ ರಾಜಹಂಸ ಇದ್ದಹಾಗೆ, ಆದರೆ ನಮ್ಮ ಯಲ್ಲಾಪುರದಿಂದ ಕಾರವಾರಕ್ಕೋ, ಹುಬ್ಬಳ್ಳಿಗೋ ಬುರುಬುರುನೇ ತಿರುಗುವ, ಕೊನೆಗೆ ಕೊರೋನಾಕ್ಕಿಂತ ಮೊದಲು ಕಮ್ಮಾಣಿಯೋ ಕೆಳಾಸೆಗಳೆಂಬೋ ಮೂಲೆ ಮೂಲೆಯ ಊರುಗಳಿಗೆ ಓಡುವ ಬಸ್‌ಗಳೇ ಇವಕ್ಕಿಂತ ಚೆನ್ನ. ಆ ಲೆಕ್ಕದಲ್ಲಿ ನಮ್ಮ ಕೆಎಸ್ಆರ್‌ಟಿಸಿ ಎಷ್ಟೋ ಬೆಸ್ಟ್.   ನಮ್ಮನ್ನು ಸುರಕ್ಷಿತವಾಗಿ ತಲುಪಿಸುವ ಹೊಣೆ ಕೆಎಸ್ಆರ್‌ಟಿಸಿ...